Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Local News

ಜಿಲ್ಲೆಯಲ್ಲಿ ಬರ ರೈತರ ಪ್ರತಿ ಎಕರೆಗೆ 50 ಸಾವಿರ ಪರಿಹಾರ ನೀಡಿ

ಜಿಲ್ಲೆಯಲ್ಲಿ ಬರ ರೈತರ ಪ್ರತಿ ಎಕರೆಗೆ 50 ಸಾವಿರ ಪರಿಹಾರ ನೀಡಿ

ರಾಯಚೂರು. ಬರ ಹಾಗೂ ನೀರಿನ ಕೊರತೆಯಿಂದ ಭತ್ತ, ಜೋಳ, ತೊಗರಿ ಮತ್ತಿತರ ಬೆಳೆಗಳು ಒಣಗಿವೆ. ರೈತರು ಸಂಪೂರ್ಣ ಬೆಳೆ ನಷ್ಟದಲ್ಲಿದ್ದಾರೆ.‌ ರೈತರ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಶಾಸಕ ಅರವಿಂದ್ ಬೆಲ್ಲದ ಹೇಳಿದರು.

ಮಾನವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿ ನಂತರ ಮಾತನಾಡಿದರು,
ಜಿಲ್ಲೆಯಲ್ಲಿ ಸಾಕಷ್ಟು ಬರ ಆವರಿಸಿದ್ದು ಬೆಳೆ ನಷ್ಟ ಉಂಟಾಗಿದೆ, ಈ ಬಗ್ಗೆ ಬರ ಅಧ್ಯಯನ ಮಾಡ ಬೇಕಾದ ಸರ್ಕಾರ ನಿರ್ಲಕ್ಷ್ಯ ವಹಿಸಿದೆ, ಬರ ಪೀಡಿತ ಪ್ರದೇಶಗಳಿಗೆ ಜಿಲ್ಲೆಯ ಸಚಿವರು ಭೇಟಿ ಮಾಡುತ್ತಿಲ್ಲ, ಬರ ಅಧ್ಯಯನ ನಡೆಸದೇ
ಬರ‌ ನಿರ್ವಹಣೆಗೆ ಜಿಲ್ಲೆಗೆ ಕೇವಲ 9 ಕೋಟಿ ಬಿಡುಗಡೆ ಮಾಡಿರುವುದು ಸಾಕಾಗುವುದಿಲ್ಲ. ಇನ್ನು ಹೆಚ್ಚಿನ ಅನುದಾನ ಜಿಲ್ಲೆಗೆ ಬಿಡುಗಡೆ ಮಾಡಬೇಕು ಎಂದು ಹೇಳಿದರು.

Megha News