Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

75ನೇ ಗಣರಾಜ್ಯೋತ್ಸವ ದಿನಾಚರಣೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

75ನೇ ಗಣರಾಜ್ಯೋತ್ಸವ ದಿನಾಚರಣೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ರಾಯಚೂರು. ಹಣ ರಾಜ್ಯೋತ್ಸವ ದಿನಾಚರಣೆ ನಿಮಿತ್ತ ಜಿಲ್ಲಾ ಉಸ್ತುವಾರಿ ಹಾಗೂ ವೈಧ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣ ಪ್ರಕಾಶ ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿದರು.

ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ದ ನಂತರ ಪಥ ಸಂಚಲನ ಪರಿ ವೀಕ್ಷಣೆ ನಡೆಸಿ ಮಾತನಾಡಿದರು, 1950 ಜ.26 ರಂದು ಸಂವಿಧಾನದವನ್ನು ಅಧಿಕೃತವಾಗಿ ಜಾರಿಗೊಳಿ ಸಲಾಯಿತು.ಅನೇಕ ಹೋರಾಟಗಾರರು, ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿ ಪಡೆದಿರುವ ಸ್ವಾತಂತ್ರ್ಯವು ಶಾಂತಿ ಹಾಗೂ ಅಹಿಂಸೆಯಿಂದ ಪ್ರೇರಿತಗೊಂಡಿದೆ ಎಂದು ತಿಳಿಸಿದರು.
ಪಥ ಸಂಚಲನದಲ್ಲಿ ಶಾಲಾ ಕಾಲೇಜುಗಳು, ಪೋಲಿಸ್ ಇಲಾಖೆ ಗೃಹ ರಕ್ಷಕದಳದಿಂದ ಪಥ ಸಂಚಲನ ನಡೆಸಲಾಯಿತು.
ನಂತರ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆಗೆ ನೃತ್ಯ ಪ್ರದರ್ಶನ ಮಾಡಿದರು.

Megha News