Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ನಾಳೆಯಿಂದ 3 ದಿನ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಚರ್ಚೆ – ಸಭಾಪತಿ ಬಸವರಾಜ ಹೊರಟ್ಟಿ

ನಾಳೆಯಿಂದ 3 ದಿನ ಉತ್ತರ ಕರ್ನಾಟಕ ಭಾಗದ ಸಮಸ್ಯೆ ಚರ್ಚೆ – ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ಈ ಬಾರಿಯ ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಹೆಚ್ಚಿನ ಚರ್ಚೆಯಾಗಿ, ಪರಿಹಾರ ಕಂಡುಕೊಳ್ಳುವ ಸಲುವಾಗಿ ಅಧಿವೇಶನದ ಎರಡು ಮತ್ತು ಮೂರನೇ ದಿನಗಳನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಬಾರಿ ಬೆಳಗಾವಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕ ಭಾಗಕ್ಕೆ ಅನುಕೂಲವಾಗುತ್ತದೆ ಎಂಬ ಭಾವನೆಯಿದೆ. ಆದರೆ, ಸಾಕಷ್ಟು ಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಯೇ ನಡೆಯುವುದಿಲ್ಲ. ಹೀಗಾಗಿ ಈ ಬಾರಿಯ ಅಧಿವೇಶನದಲ್ಲಿ ಉತ್ತರಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗಾಗಿ ವಿಧಾನಪರಿಷತ್‌ನಲ್ಲಿ ಎರಡು ದಿನ ಮೀಸಲಿಡಲಾಗುವುದು ಎಂದರು.
ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ನಡೆಸುವ ಉದ್ದೇಶ ಹೊಂದಿರುವ ಸಂಘಟನೆಗಳನ್ನು ಕರೆದು ಈಗಲೇ ಮಾತುಕತೆ ನಡೆಸುವಂತೆ ಕೃಷಿ, ಶಿಕ್ಷಣ, ಉನ್ನತ ಶಿಕ್ಷಣ ಹಾಗೂ ಕಂದಾಯ ಸಚಿವರಿಗೆ ಪತ್ರ ಬರೆದಿದ್ದೇನೆ ಎಂದರು.
ಅದರ ಜತೆಗೆ ಮುಖ್ಯಮಂತ್ರಿಗಳಿಗೂ ಪತ್ರ ಬರೆದು ಅಧಿವೇಶನ ಅರ್ಥಪೂರ್ಣವಾಗಿ ನಡೆಸಲು ಬೇಕಾಗುವ ವ್ಯವಸ್ಥೆ ಮಾಡಬೇಕೆಂದು ಕೋರಿದ್ದೇನೆ ಎಂದು ತಿಳಿಸಿದರು.

Megha News