Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Local News

ಜಿಲ್ಲೆಯಲ್ಲಿ ಶ್ರೀರಾಮ ಮಂದಿರದಲ್ಲಿ ವಿವಿಧ ಪೂಜಾ ಕಾರ್ಯಕ್ರಮ, ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೋಲಿಸ್ ಪತ ಸಂಚಲನ

ಜಿಲ್ಲೆಯಲ್ಲಿ ಶ್ರೀರಾಮ ಮಂದಿರದಲ್ಲಿ ವಿವಿಧ ಪೂಜಾ ಕಾರ್ಯಕ್ರಮ, ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೋಲಿಸ್ ಪತ ಸಂಚಲನ

ರಾಯಚೂರು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪೋಲಿಸ್ ಇಲಾಖೆಯಿಂದ ಪತ ಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಿದರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿನ ಬಾಲರಾಮನ ಪ್ರಾಣಪ್ರತಿಷ್ಠೆ ಸಮಾರಂಭದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತವಾಗಿ ಶ್ರೀ ರಾಮ ಮಂದಿರದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯುತ್ತಿರುವ ನಿಮಿತ್ತ ಜಿಲ್ಲೆಯ ಎಲ್ಲಾ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪೋಲಿಸರು ನಗರದ ಬೀದಿ ಬೀದಿಗಳಲ್ಲಿ ಪತ ಸಂಚಲನ ನಡೆಸಿದರು.

ರಾಯಚೂರು, ಮಾನವಿ, ಸಿಂಧನೂರು, ದೇವದುರ್ಗ, ಸಿರವಾರ, ಲಿಂಗಸುಗೂರು, ಮುದಗಲ್, ಬಳಗನೂರು, ಹಟ್ಟಿ, ಗಬ್ಬೂರು ಸೇರಿದಂತೆ ವಿವಿಧ ಪೋಲಿಸ್ ಠಾಣೆಯ ಪೋಲಿಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಹಿನ್ನೆಯಲ್ಲಿ ಜಿಲ್ಲೆಯ ಎಲ್ಲಾ ಪೋಲಿಸ್ ಠಾಣೆಗಳಿಂದ ಮುಂಜಾಗ್ರತ ಕ್ರಮವಾಗಿ, ಪ್ರಮುಖ ರಸ್ತೆಗಳಲ್ಲಿ, ರೂಟ್ ಮಾರ್ಚ್ ಕೈಗೊಳ್ಳಲಾಯಿತು.

Megha News