Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಕೃಷ್ಣಾ ನದಿಗೆ 68480 ಸಾವಿರ ಕ್ಯುಸೆಕ್ ನೀರು ಬಿಡುಗಡೆ, ನದಿ ಪಾತ್ರದ ಗ್ರಾಮದಲ್ಲಿ ಪ್ರವಾಹ ಭೀತಿ

ಕೃಷ್ಣಾ ನದಿಗೆ 68480 ಸಾವಿರ ಕ್ಯುಸೆಕ್ ನೀರು ಬಿಡುಗಡೆ, ನದಿ ಪಾತ್ರದ ಗ್ರಾಮದಲ್ಲಿ ಪ್ರವಾಹ ಭೀತಿ

ರಾಯಚೂರು.ಆಲಮಟ್ಟಿ ಅಣೆಕಟ್ಟಿನಿಂದ 65 ಸಾವಿರ ಕ್ಯುಸೆಕ್ ನೀರು ಹರಿಸಿದ್ದರಿಂದ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಿನ ಪ್ರಮಾಣದಲ್ಲಿದೆ, ಇದೀಗ ನಾರಾಯಣ ಪುರ ಜಲಾಶಯದಿಂದ ಕೃಷ್ಣಾ ನದಿಗೆ ನಿತ್ಯ 68480 ಸಾವಿರ ಕ್ಯುಸೆಕ್ ನೀರು ಹರಿಸಲಾಗಿದೆ.

ಇದರಿಂದಾಗಿ ಪ್ರವಾಹ ಭೀತಿ ಉಂಟಾಗಿದೆ.
ನಾರಾಯಣಪುರ ಜಲಾಶಯದ 22 ಗೇಟ್​​ಗಳಿಂದ ನಿತ್ಯ 68480 ಸಾವಿರ ಕ್ಯುಸೆಕ್ ನೀರನ್ನು ಸದ್ಯ ನದಿಗೆ ಹರಿಸಲಾಗಿದೆ. ಕೃಷ್ಣ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು, ಪ್ರವಾಹ ಭೀತಿ ಎದುರಾಗಿದೆ.
ನಾರಾಯಣಪುರ ಅಣೆಕಟ್ಟಿಗೆ ಒಳ ಹರಿವಿನ ಆಧಾರದ ಮೇಲೆ ನದಿಗೆ ಇನ್ನು ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ, ಹಂಚಿನಾಳ, ಕಡದರಗಡ್ಡಿ, ಯಳಗೊಂದಿ, ಯರಗೋಡಿ, ಜಲಾದುರ್ಗ ಹಾಗೂ ದೇವದುರ್ಗ ತಾಲೂಕಿನ ಕೋಳೂರು, ಜೋಳದಡಗಿ, ಆಣೆ ಮಲ್ಲೇಶ್ವರ, ಗಲಗ, ಗೂಗಲ್, ಮದರಕಲ್, ರಾಯಚೂರು ತಾಲೂಕಿನ ಹರಷಿಣಗಿ, ಗುರ್ಜಾ ಪೂರ, ಕರೆಕಲ್, ಕಾಡ್ಲೂರು, ದೊಂಗ ರಾಂಪೂರ,
ದತ್ತಾತ್ರೇಯ, ಸೇರಿದಂತೆ ನದಿ ಪಾತ್ರದ ಹಳ್ಳಿಗಳು
ಪ್ರವಾಹ ಭೀತಿ ಎದುರಾಗುವ ಸಾಧ್ಯತೆಗಳಿವೆ,
ನದಿಗೆ ಒಳಹರಿವಿನ ಪ್ರಮಾಣ ಹೆಚ್ಚಳವಾದರೆ, ಮತ್ತಷ್ಟು ಹೊರ ಹರಿವು ಕೂಡ ಉಂಟಾಗುವ ಸಾಧ್ಯತೆಯಿದೆ. ಇದರಿಂದ ಪ್ರವಾಹ ಭೀತಿ ಎದುರಾಗಿದ್ದು, ಈಗಾಗಲೇ ನದಿ ಪಾತ್ರ ಜನರಿಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

Megha News