Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಸೆ.22ರಂದು ಅಭಿಪ್ರಾಯ ಪಡೆಯಲು ಸಭೆ: ಜಿಲ್ಲಾಧಿಕಾರಿ ಡಾ.ಸುಶೀಲ ಬಿ.

ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಸೆ.22ರಂದು ಅಭಿಪ್ರಾಯ ಪಡೆಯಲು ಸಭೆ: ಜಿಲ್ಲಾಧಿಕಾರಿ ಡಾ.ಸುಶೀಲ ಬಿ.

ರಾಯಚೂರು. ಗೌರವಾನ್ವಿತ ಉಚ್ಚ ನ್ಯಾಯಲಯದ ನಿರ್ದೇಶನದಂತೆ ರಾಯಚೂರು ತಾಲೂಕಿನ ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿಪ್ರಾಯ ಪಡೆಯಲು ಸೆ.22ರಂದು ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಆ ಗ್ರಾಮದ ಭಕ್ತಾದಿಗಳು, ಸಾರ್ವಜನಿಕರು ಹಾಜರಾಗುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಮನವಿ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಪೀಠದ ಉಚ್ಚ ನ್ಯಾಯಾಲಯದಲ್ಲಿ ದಾಖಲಾ ಗಿರುವ ಪಿಟಿಷನ್ ಸಂಖ್ಯೆ;202656/2014ಕ್ಕೆ ಸಂಬಂಧಿಸಿದಂತೆ ನಾರದಗಡ್ಡೆ ಮಠದ ಆಸ್ತಿ ನಿರ್ವಹಣೆ ಕುರಿತು ಯಾದಗಿರಿ ಜಿಲ್ಲಾಧಿಕಾರಿಯ ಕಚೇರಿಯ ಸಭಾಂಗಣದಲ್ಲಿ ಸಭೆ ಜರುಗಿಸಿ ಅಲ್ಲಿನ ಗ್ರಾಮದ, ಭಕ್ತಾದಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನು ಪಡೆದು ವರದಿಯನ್ನು ಸಲ್ಲಿಸುವಂತೆ ಸೂಚಿಸಿರುತ್ತಾರೆ.
ಈ ಮಠದ ಆಸ್ತಿ ನಿರ್ವಹಣೆಯ ಬಗ್ಗೆ ಅಭಿಪ್ರಾಯ ಪಡೆಯಲು ಸೆ.22ರ ಮಧ್ಯಾಹ್ನ 12ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅವಶ್ಯ ದಾಖಲೆಗಳೊಂದಿಗೆ ಸಂಬAಧಪಟ್ಟ ಅಧಿಕಾರಿಗಳು, ಮಠದ ಪೀಠಾಧಿಪತಿಗಳು, ಭಕ್ತಾದಿಗಳು ಹಾಗೂ ಸಾರ್ವಜನಿಕರು ತಮ್ಮ ಗುರುತಿನ ಚೀಟಿಯೊಂದಿಗೆ ಹಾಜರಾಗಲು ಯಾದಗಿರಿ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Megha News