Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಮಾನವಿ ತಾಲೂಕಿನ ವಿವಿಧ ಗ್ರಾಮಗಳ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಓ ರಾಹುಲ್ ಪಾಂಡ್ವೆ: ಪೂರ್ಣಗೊಂಡ ಕಟ್ಟಡ ಹಸ್ತಾಂತರಿಸಲು ಸೂಚನೆ

ಮಾನವಿ ತಾಲೂಕಿನ ವಿವಿಧ ಗ್ರಾಮಗಳ ಕಾಮಗಾರಿ ಪರಿಶೀಲಿಸಿದ ಜಿ.ಪಂ ಸಿಇಓ ರಾಹುಲ್ ಪಾಂಡ್ವೆ: ಪೂರ್ಣಗೊಂಡ  ಕಟ್ಟಡ ಹಸ್ತಾಂತರಿಸಲು ಸೂಚನೆ

ರಾಯಚೂರು: ನ.12 ಮಾನ್ವಿ ತಾಲ್ಲೂಕಿನ ಮದ್ಲಾಪೂರು ಗ್ರಾಮ ಪಂಚಾಯತಿ ಹಾಗೂ ತಾಲ್ಲೂಕ ಪಂಚಾಯತಿ ಕಾರ್ಯಾಲಯಕ್ಕೆ ರಾಯಚೂರು ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಾಂಡ್ವೆ ರಾಹುಲ್ ತುಕಾರಾಮ ರವರು ಭೇಟಿ ನೀಡಿ ವಿವಿಧ ಕಾಮಗಾರಿ ಪರಿಶೀಲಿಸಿದರು.

ಮಾನವಿ ತಾಲ್ಲೂಕಿನ ಮದ್ಲಾಪೂರು ಗ್ರಾಮ ಪಂಚಾಯತಿಯ ಚೀಕಲಪರ್ವಿ ಗ್ರಾಮದ ಜನತಾ ಕಾಲೋನಿಯಲ್ಲಿ ಪಂಚಾಯತ ರಾಜ್ ಇಂಜಿನಿಯರಿಂಗ್ ಉಪವಿಭಾಗ ಮಾನವಿ ರವರು ಇಲಾಖೆಯ ಕೆ.ಕೆ.ಆರ್.ಡಿ.ಬಿ ಯಡಿ ನಿರ್ಮಿಸಿರುವ 2 ಹೆಚ್ಚುವರಿ ಶಾಲಾ ಕೊಠಡಿಗಳ ಕಾಮಗಾರಿ ಪರಿಶೀಲನೆ ಮಾಡಿ ಪೂರ್ಣಗೊಂಡಿರುವ ಶಾಲಾ ಕೊಠಡಿಗಳನ್ನು ಕೂಡಲೇ ಶಾಲಾ ಮುಖ್ಯಸ್ಥರಿಗೆ ಹಸ್ತಾಂತರ ಮಾಡಲು ಸೂಚಿಸಲಾಯಿತು.
ಶಾಲಾ ಆವರಣದಲ್ಲಿ MGNREGA ಅಡಿ ನಿರ್ಮಿಸಿರುವ ಅಡುಗೆ ಕೋಣೆಯನ್ನು ಪೂರ್ಣಗೊಳಿಸಿ ಹಸ್ತಾಂತರಿಸಲು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರವರಿಗೆ ಸೂಚಿಸಲಾಯಿತು. ನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ನಂತರ ಆಯುಷ್ಮಾನ ಕೇಂದ್ರಕ್ಕೆ ಭೇಟಿ ನೀಡಿ ಗ್ರಾಮಸ್ಥರ ಆರೋಗ್ಯ ತಪಾಸಣೆ ಬಗ್ಗೆ ಸಿಎಚ್ಒ ರವರೊಂದಿಗೆ ಸಂವಾದ ಮಾಡಿದರು.
ಆಯುರ್ವೇದ ಆಸ್ಪತ್ರೆ ಕಟ್ಟಡ ಕಾಮಗಾರಿಯ ನಿವೇಶನ ಪರಿಶೀಲಿಸಿ ತಕ್ಷಣ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಟ್ಟೆ ನಿರ್ಮಾಣ ಕೈಗೊಳ್ಳಲು ಸೂಚಿಸಲಾಯಿತು. ನಂತರ ಶಾಲೆಯ ಮುಖ್ಯೋಪಾಧ್ಯಾಯ ರೊಂದಿಗೆ ಕುಡಿಯುವ ನೀರಿನ ಬಗ್ಗೆ ಚರ್ಚೆ ಮಾಡಿ ಪಿಡಿಒ ದೇವಪ್ಪ ಮರಡಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಸೂಚನೆ ನೀಡಿದರು. ನಂತರ ಸ.ಹಿ.ಪ್ರಾ. ಶಾಲೆಯ ಆವರಣದಲ್ಲಿನ ಭೊಜನಾಲಯ ಕಾಮಗಾರಿ ಪರಿಶೀಲನೆ ಮಾಡಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಶೈಕ್ಷಣಿಕ ಅಭ್ಯಾಸ ಹಾಗೂ ಸೌಲಭ್ಯಗಳ ಬಗ್ಗೆ ವಿಚಾರಿಸಲಾಯಿತು. ತದನಂತರ ತಾಲ್ಲೂಕು ಪಂಚಾಯತ ಹೊಸ ಕಟ್ಟಡ ಕಾರ್ಯಾಲಯದ ಎಲ್ಲಾ ಶಾಖೆಗಳಿಗೆ ಭೇಟಿ ನೀಡಿ ಪರಿಶೀಲನೆ ಜೊತೆಗೆ ನರೇಗಾ ವಿಭಾಗಕ್ಕೆ ತೆರಳಿ ಕಾಲಮಿತಿಯಲ್ಲಿ ಗ್ರಾಮೀಣ ಕೂಲಿಕಾರ್ಮಿಕರಿಗೆ ಕೂಲಿ ಪಾವತಿಯಾಗಬೇಕೆಂದು ತಿಳಿಸಿದರು. ನಂತರ ತಾಲ್ಲೂಕು ಪಂಚಾಯತ ಕಛೇರಿ ಮೇಲಿನ ಸಭಾಂಗಣಕ್ಕೆ ಭೇಟಿ ನೀಡಿ ವಿಕ್ಷೀಸಿದರು.

ಈ ಸಂದರ್ಭದಲ್ಲಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಖಾಲೀದ್ ಅಹಮದ್, ಪಂಚಾಯತ್ ರಾಜ್ ಉಪ ವಿಭಾಗದ ಎಇಇ ಚೌವಣ್ , ಸಹಾಯಕ ನಿರ್ದೇಶಕರು ದೀಪಾ ಅರಳಿಕಟ್ಟಿ, ಪಿಡಿಓ ವೆಂಕಟೇಶ ಹಾಗೂ ತಾಲ್ಲೂಕು ಪಂಚಾಯತ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

Megha News