ರಾಯಚೂರು. ಟಾಟಾ ಎಸ್ ವಾಹನದ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ನುಗ್ಗಿದ ಘಟನೆ ದೇವದುರ್ಗ ತಾಲೂಕಿನ ಜಾಡಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಟಾಟಾ ಎಸ್ ವಾಹನದಲ್ಲಿದ್ದು ಕೂಲಿ ಕಾರ್ಮಿ ಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ಹೋಗುವಾಗ ಈ ಘಟನೆ ನಡೆದಿದೆ.
ಜಾಡಲದಿನ್ನಿ ಗ್ರಾಮ ಸೇರಿ ಸುತ್ತಮುತ್ತಲಿನ ಗ್ರಾಮದ ಕೂಲಿಕಾರರನ್ನು ಸಾಗಿಸುತ್ತಿದ್ದ ಟಾಟಾ ಏಸ್ ಜಾಡಲದಿನ್ನಿ ಗ್ರಾಮದ ಕೆನಾಲ್ ಬಳಿಯ ಕಚ್ಚಾ ರಸ್ತೆಯಿಂದ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಇಳಿದಿದೆ.
ನೀರಿನಲ್ಲಿ ನಿಂತದ್ದರಿಂದ ವಾಹನ ಬಂದ್ ಆಗಿದೆ,
ಕೂಲಿ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.
ಮಹಿಳೆಯರನ್ನುಸ್ಥಳೀಯರು ರಕ್ಷಿಸಿದ್ದಾರೆ.
ಸಿರವಾರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.