Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ಹಿರಿಯ ಪತ್ರಿಕಾ ಛಾಯಾಗ್ರಾಹಕ ಸಂತೋಷ ಸಾಗರ್ ಹೃದಯಾಘಾತದಿಂದ ನಿಧನ

ಹಿರಿಯ ಪತ್ರಿಕಾ ಛಾಯಾಗ್ರಾಹಕ ಸಂತೋಷ ಸಾಗರ್ ಹೃದಯಾಘಾತದಿಂದ ನಿಧನ

ರಾಯಚೂರು. ಹಿರಿಯ ಫೋಟೋ ಜರ್ನಲಿಸ್ಟ್ ಹಾಗೂ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾ ರಿಣಿ ಸದಸ್ಯ ಸಂತೋಷ ಸಾಗರ್ ಕಳೆದ ರಾತ್ರಿ 12-50 ಗಂಟೆಗೆ ಹೃದಯ ಘಾತದಿಂದ ನಿಧನರಾಗಿದ್ದಾರೆ.

ಸಂತೋಷ ಸಾಗರ ಅವರು ಕೆಪಿಎನ್, ದಿ ಹಿಂದೂ ಸೇರಿದಂತೆ ವಿವಿಧ ಪತ್ರಿಕಗಳಲ್ಲಿ ಫೋಟೋ ಜರ್ನಲಿಸ್ಟ್ ಆಗಿ ಸೇವೆ ಸಲ್ಲಿಸಿದ್ದಾರೆ.
ಅವರ ಹೃದಯಾಘಾತದಿಂದ ನಿಧನರಾಗಿರುವ ಸುದ್ದಿ ಪತ್ರಿಕಾ ಮಾಧ್ಯಮ ಮತ್ತು ಕುಟುಂಬ ದವರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ, ಅವರ ಆತ್ಮಕ್ಕೆ ಮತ್ತು ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ತುಂಬಲಿ.

ಮೃತರು ಪತ್ನಿ, ಇಬ್ಬರು ಪುತ್ರರು, ಒಬ್ಬರು ಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಬುಧವಾರ ಸಂಜೆ 5 ಗಂಟೆಗೆ ನಗರದ ಗದ್ವಾಲ್ ರಸ್ತೆಯ ಉಪ್ಪಾರ ಸಮಾಜದ ರುದ್ರಭೂಮಿಯಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಂತೋಷ ಸಾಗರ್ ನಿಧನಕ್ಕೆ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸದಸ್ಯರು ಸೇರಿದಂತೆ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Megha News