Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ಟಿಎಲ್‌ಬಿಸಿ ಕಾಲುವೆಯ ಗೇಜ್ ನಿರ್ವಹಣೆಗೆ ಮಿಲಿಮೀಟರ್ ಅಳವಡಿಕೆಗೆ 7 ದಿನ ಗಡುವು ನಿರ್ಲಕ್ಷ್ಯಿಸಿದರೆ ಕ್ರಮ

ಟಿಎಲ್‌ಬಿಸಿ ಕಾಲುವೆಯ ಗೇಜ್ ನಿರ್ವಹಣೆಗೆ ಮಿಲಿಮೀಟರ್ ಅಳವಡಿಕೆಗೆ 7 ದಿನ ಗಡುವು ನಿರ್ಲಕ್ಷ್ಯಿಸಿದರೆ ಕ್ರಮ

ರಾಯಚೂರು. ಟಿಎಲ್‌ಬಿಸಿ ಕಾಲುವೆ ಮೂಲಕ ಹರಿಸಿದ್ದು ಮೇಲ್ಬಾಗದಲ್ಲಿ ಅಕ್ರಮ ನೀರಾವರಿ ಯಿಂದ ಕೊನೆ ಭಾಗದ ಸಿರವಾರ ವ್ಯಾಪ್ತಿಯಲ್ಲಿ ಗೇಜ್ ನಿರ್ವಹಣೆಯಾಗದೇ ನೀರು ತಲುಪುತ್ತಿಲ್ಲ, ಅಕ್ರಮ ನೀರಾವರಿಗೆ ಅಳವಡಿಸಿ ಟಿಸಿ ತೆರವುಗೊ ಳಿಸುವುದರ ಜೊತೆಗೆ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡಬೇಕು, ಗೇಜ್ ನಿರ್ವಹಣೆಗೆ ಟೆಲಿ ಮೀಟರ್ ಅಳವಡಿಕೆ ಮಾಡಲು 7 ದಿನ ಗಡುವು ನೀಡಲಾಗುವುದು ಸರಿಪಡಿಸದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ವಹಿಸುವುದಾಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತುಂಗಭದ್ರಾ ಜಲಾಶಯದ ಎಡದಂಡೆ ನಾಲೆಯ ಕಾಲುವೆಗಳಿಗೆ ನೀರು ಹರಿಸುವ ಕುರಿತು ನೀರಾವರಿ ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು,
ಮೇಲ್ಬಾಗದಲ್ಲಿ ಅಕ್ರಮ ನೀರಾವರಿಯಿಂದ ಕೆಳ ಭಾಗದಲ್ಲಿ ನೀರು ತಲುಪದೇ ರೈತರು ಹೋರಾಟ ಮಾಡಿದ್ದು, ಮೇಲ್ಬಾಗದಲ್ಲಿ ಅಕ್ರಮ ನೀರಾವರಿ ತಡೆಗೆ ವಿದ್ಯುತ್ ಸಂಪರ್ಕ ಕಡಿತದ ಜೊತೆಗೆ ಟಿಸಿ ಅಳವಡಿಕೆ ಮಾಡಿದನ್ನು ತೆರವುಗೊಳಿಸಬೇಕು, 47 ಮೈಲ್ ನಲ್ಲಿ 11.80 ದಿಂದ 11.90 ವರೆಗೆ ನಿರ್ವಹಣೆ ಆಗಬೇಕು, ಕೆಳ ಭಾಗದಲ್ಲಿಯೂ ಸಹ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡಲು ಸೂಚಿಸಿದರು.
ಈ ಹಿಂದೆ ಕೊಪ್ಪಳ ಸಭೆಯಲ್ಲಿ ಸೂಚಿಸದಂತೆ ವಡ್ಡರಹಟ್ಟಿಯಿಂದ ಇಡಿದು ಕೊನೆ ಭಾಗದವರೆಗೆ ಗೇಜ್ ನಿರ್ವಹಣೆ ಮಾಡಿದರೆ, ರೈತರಿಗೆ ನೀರು ದೊರೆಯುತ್ತದೆ, ಮೈಲ್ ನಂ.104 ರಲ್ಲಿ 5.5 ಗೇಜ್ ನಿರ್ವಹಣೆ ಮಾಡಿದರೆ ನೀರು ದೊರೆಯಲು ಸಾಧ್ಯವೆಂದರು‌.
ಮೈಲ್ ನಂ.69ರಲ್ಲಿ ಪ್ರಸ್ತುತ 8.50 ಅಡಿ ಮತ್ತು 104ರಲ್ಲಿ 5.5 ಅಡಿ ಗೇಜ್ ನಿರ್ವಹಣೆಗೆ ಸೂಚಿಸದೆ, ಮೈಲ್ ನಂ.47ರಲ್ಲಿ 11.50 ಅಡಿ ಮೇಲ್ ನಂ.8.50 ಅಡಿ ನಿರ್ವಹಣೆಯಾ ಗಬೇಕಿದೆ ಎಂದರು.
ಕೆಳ ಬಾಗಕ್ಕೆ ಸಂಪೂರ್ಣವಾಗಿ ನೀರು ಒದಗಿಸಲು ಮೇಲ್ಬಾಗದಿಂದ ಕೆಳ ಭಾಗದವರೆಗೆ ಕಾಲುವೆಗಳ ಗೇಜ್ ಪರಿಶೀಲನೆ ಮತ್ತು ಗೇಜ್ ಅಳವಡಿಕೆ ಕ್ರಮ ವಹಿಸಲು ಅಧಿಕಾರಿಗಳು ಹಾಗೂ ರೈತ ಮುಖಂಡರೊಂದಿಗೆ ಕಮಿಟಿ ಮಾಡಿ ಮೇಲ್ಬಾಗದಿಂದ ಕೆಲ ಭಾಗದವರೆಗೆ ಗೇಜ್ ಪರಿಗಣಿಸಿ ಸರಿಪಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಎಸ್‌ಸಿ ಬಿ.ನಿಖಿಲ್, ಸಹಾಯಕ ಆಯುಕ್ತೆ ಮಹೆಬೂಬಿ, ನೀರಾವರಿ ಅಧಿಕಾರಿ ಗಳು ರೈತ ಮುಖಂಡರಾದ ನಾಗನಗೌಡ ಹರವಿ, ಶಂಕರ್ ಗೌಡ, ಮಾಜಿ ಶಾಸಕ ಗಂಗಾಧರ ನಾಯಕ ಸೇರಿದಂತೆ ರೈತರು ಭಾಗವಹಿಸಲಿದ್ದರು.

Megha News