Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Crime NewsLocal News

ರಾಮಕೃಷ್ಣ ಆಶ್ರಯದಲ್ಲಿ ಮತ್ತೋರ್ವ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಬೆಳಕಿಗೆ

ರಾಮಕೃಷ್ಣ ಆಶ್ರಯದಲ್ಲಿ ಮತ್ತೋರ್ವ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಬೆಳಕಿಗೆ

ರಾಯಚೂರು. ರಾಮಕೃಷ್ಣ ಆಶ್ರಮದಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೆ ಇದೀಗ ಮತ್ತೊಂದು ಹಲ್ಲೆ ನಡೆದ ಪ್ರಕರಣ ಬೆಳಕಿಗೆ ಬಂದಿದೆ.

ರಾಮಕೃಷ್ಣ ಆಶ್ರಮದಲ್ಲಿ ದೈಹಿಕವಾಗಿ ಹಲ್ಲೆ ನಡೆಸಿದ್ದು ನಿನ್ನೆಯಷ್ಠ ಪ್ರಕರಣ ಬೆಳಕಿಗೆ ಬಂದಿತ್ತು, ಇದೀಗ ಮತ್ತೋರ್ವ ವಿದ್ಯಾರ್ಥಿ ಮೇಲೆ ಆಗಿದ ಎಂದು ತಿಳಿದು ಬಂದಿದೆ.  ಮತ್ತೋಬ್ಬ  ವಿದ್ಯಾರ್ಥಿಗೆ ಹಲ್ಲೆ ನಡೆಸಿರುವ ಮಾಹಿತಿ ಅಧಿಕಾರಿಗಳು ತಿಳಿಸಿದ್ದಾರೆ.
ಉದಯ ನಗರದ ಬಡಾವಣೆಯಲ್ಲಿರುವ ರಾಮಕೃಷ್ಣ ಆಶ್ರಮದಲ್ಲಿ ನಡೆಸ ಘಟನೆಗೆ
ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಮಕ್ಕಳನ್ನು ವಿಚಾರಣೆ ನಡೆಸಿ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.
ಹಲ್ಲೆಗೊಳಗಾದ ಮತ್ತೋರ್ವ ವಿದ್ಯಾರ್ಥಿ ಮೌನೇಶ್ ಎಂದು ತಿಳಿದು ಬಂದಿದೆ. ವಿದ್ಯಾರ್ಥಿ ಮೇಲೆ ಮರಣಾಂತಿಕವಾಗಿ ಆಶ್ರಮದ ಗುರೂಜಿ ಹಲ್ಲೆ ನಡೆಸಿ ಕಬ್ಬಿಣದ ಸ್ಕೇಲ್ ನಿಂದ ಮನ ಬಂದಂತೆ ಥಳಿಸಿದ್ದಾರೆ. ಮೈತುಂಬ ಗಾಯಗಳಾ ಗಿವೆ, ವಿದ್ಯಾರ್ಥಿ ಅಧಿಕಾರಿಗಳ ಮುಂದೆ ಹೇಳಿಕೊಂಡಿದ್ದಾನೆ.
ಈ ಕುರಿತು ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Megha News