Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ಸಿರಿಧಾನ್ಯ ಉತ್ಸವದ ಅಂಗವಾಗಿ ಸಿರಿಧಾನ್ಯ ಜಾಗೃತಿ ನಡಿಗೆಗೆ ಚಾಲನೆ

ಸಿರಿಧಾನ್ಯ ಉತ್ಸವದ ಅಂಗವಾಗಿ ಸಿರಿಧಾನ್ಯ ಜಾಗೃತಿ ನಡಿಗೆಗೆ ಚಾಲನೆ

ರಾಯಚೂರು.ಸಿರಿಧಾನ್ಯ ಉತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಕೃಷಿ ಇಲಾಖೆ ವತಿಯಿಂದನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಿರಿಧಾನ್ಯಗಳ ಜಾಗೃತಿ ನಡಿಗೆಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಜಾಗೃತಿ ನಡಿಗೆಯು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಬಸವೇಶ್ವರ ವೃತ್ತದ ಮೂಲಕ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ವರೆಗೆ ಡೊಳ್ಳು ಕುಣಿತ, ಎತ್ತಿನ ಬಂಡಿ ಮೆರವಣಿಗೆ ಯೊಂದಿಗೆ ಜರುಗಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕುಲಪತಿ ಡಾ.ಹನುಮಂತಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್.ದೇವಿಕಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Megha News