Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಸಿಎಂ ಭರವಸೆ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಸಿಎಂ ಭರವಸೆ

ಲಿಂಗಸುಗೂರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಒಂದು ವಾರದೊಳಗೆ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ಭರವಸೆ ನೀಡಿದ್ದರು. ಆದರೆ ಅವರು ನೀಡಿದ ಕಾಲಾ ವಕಾಶ ಮುಗಿದಿದೆ. ಆದರೂ ಸಂಕ್ರಾಂತಿವರೆಗೆ ಕಾಯುತ್ತೇವೆ ಎಂದು ಪಂಚಮಸಾಲಿ ಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಸಮಾಜದ ಚುನಾಯಿತ ಪ್ರತಿನಿಧಿಗಳು ಹಾಗೂ ಮುಖಂಡರ ಸಭೆ ಕರೆದು ಮೀಸಲಾತಿ ನೀಡುವ ವಿಚಾರದಲ್ಲಿ ಕಾನೂನು ತಜ್ಞರ ಜತೆಗೆ ಚರ್ಚಿಸಿ ಒಂದು ವಾರದಲ್ಲಿ ನಿಲುವು ಪ್ರಕಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ನೀಡಿದ ಭರವಸೆಯಂತೆ ವಾರ ಕಾಲಾವಕಾಶ ಮುಗಿದಿದೆ. ಆದರೂ ಸಂಕ್ರಾಂತಿವರೆಗೆ ಗಡುವು ನೀಡುತ್ತೇವೆ, ಅದರೊಳಗಾಗಿ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

Megha News