Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಅಪೌಷ್ಠಿಕತೆ ಸೂಚ್ಯಂಕದಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ. ಏಕೆ ಹೀಗಾಯ್ತು ವಿಶ್ವಗುರು ಉತ್ತರಿಸಬೇಕು-ಸಿಎಂ ಸಿದ್ದರಾಮಯ್ಯ ಲೇವಡಿ.

ಅಪೌಷ್ಠಿಕತೆ ಸೂಚ್ಯಂಕದಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ. ಏಕೆ ಹೀಗಾಯ್ತು ವಿಶ್ವಗುರು ಉತ್ತರಿಸಬೇಕು-ಸಿಎಂ ಸಿದ್ದರಾಮಯ್ಯ ಲೇವಡಿ.

ಬೆಂಗಳೂರು. ಅಪೌಷ್ಠಿಕತೆ ಸೂಚ್ಯಂಕದಲ್ಲಿ ಗುಜರಾತ್ ರಾಜ್ಯ  ಮತ್ತು ಭಾರತದ ಸೂಚ್ಯಂಕ ಏರಿಕೆ ಆಗುತ್ತಲೇ ಇದೆ.  ಏಕೆ ಹೀಗಾಯ್ತು ಎಂದು ತನ್ನನ್ನು ತಾನು ವಿಶ್ವಗುರು ಎಂದು ಕರೆದುಕೊ ಳ್ಳುವ ಪ್ರಧಾನಮಂತ್ರಿ ಮೋದಿಯವರು ಉತ್ತ ರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಜ್ಯ ಸರ್ಕಾರದ ಅತ್ಯಂತ ಮಹತ್ವಪೂರ್ಣ ಮತ್ತು ಅತ್ಯಂತ ಜನಾರೋಗ್ಯ ಕಾರ್ಯಕ್ರಮ ವಾದ ಅನೀಮಿಯ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾ ಡಿದರು.
ಗುಜರಾತ್ ಮಾದರಿ, ಗುಜರಾತ್ ಮಾದರಿ ಎನ್ನುವವರು ಗುಜರಾತ್ ಅಪೌಷ್ಠಿಕತೆ ಸೂ ಚ್ಯಂಕದಲ್ಲಿ ಮೇಲಕ್ಕೆ ಏರುತ್ತಿರುವುದು ಏಕೆ ಎನ್ನುವುದಕ್ಕೆ ಉತ್ತರಿಸಬೇಕು. ಗುಜರಾತ್ ನ ಈ ಸ್ಥಿತಿ ಮಾದರಿ ಆಗಲು ಸಾಧ್ಯವೇ ಎಂದು ರಾಷ್ಟ್ರೀ ಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ 4 ಮತ್ತು 5 ರಲ್ಲಿ ಇರುವ ಅಂಕಿ ಅಂಶಗಳನ್ನು ತುಲನೆ ಮಾಡಿ ಲೇವಡಿ ಮಾಡಿದರು.
ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ. ಆದ್ದರಿಂದ ಈ ಮೂರು ಪಿಡುಗುಗಳಿಗೆ ಚಿಕಿತ್ಸೆ ಕೊಡುವುದು ನಮ್ಮ ಸರ್ಕಾರದ ಪ್ರಥಮ ಆಧ್ಯತೆಯಾಗಿದೆ.  ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯದ ಸವಲತ್ತು ತಲುಪಿಸುವುದು ನಮ್ಮ ಸರ್ಕಾರದ ಗುರಿಯಾಗಿದೆ. ಇದಕ್ಕಾಗಿ ಸರ್ಕಾರ ಅಗತ್ಯವಿದ್ದಷ್ಟು ಹಣ ನೀಡಲು ಸಿದ್ದವಿದೆ ಎಂದರು.

Megha News