Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಸಿಎಂ ಸಿದ್ದು, ಎಂಬಿ ಪಾಟೀಲ್ ಪ್ರತೇಕ ಲಿಂಗಾಯತ ಧರ್ಮಕ್ಕೆ ಕೈ ಹಾಕಿ ಸುಟ್ಟಿಕೊಂಡಿದ್ದಾರೆ ಯತ್ನಾಳ ವಾಗ್ದಾಳಿ

ಸಿಎಂ ಸಿದ್ದು, ಎಂಬಿ ಪಾಟೀಲ್ ಪ್ರತೇಕ ಲಿಂಗಾಯತ ಧರ್ಮಕ್ಕೆ ಕೈ ಹಾಕಿ ಸುಟ್ಟಿಕೊಂಡಿದ್ದಾರೆ ಯತ್ನಾಳ ವಾಗ್ದಾಳಿ

ರಾಯಚೂರು. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಎಂ.ಬಿ.ಪಾಟೀಲ್ ಅವರು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈಹಾಕಿ ಈ ಹಿಂದೆ‌ ಕೈಸುಟ್ಟುಗೊಂಡಿದ್ದಾರೆ. ಇಂತಹ ಕೆಲಸಕ್ಕೆ ಕೈ ಹಾಕಿ ಸುಟ್ಟುಕೊಳ್ಳಬಾರದೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.

ಲಿಂಗಸುಗೂರು ತಾಲೂಕಿನ ಯರಡೋಣಿ ಗ್ರಾಮದಲ್ಲಿ 2ಎ ಮೀಸಲಾತಿಗೆ ಆಗ್ರಹಿಸಿ ಸಮಾವೇಶದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತರನ್ನು ಕೂಡಿಸುವಂತಹ ಕೆಲಸ‌ ಮಾಡಬೇಕು ಆದರೆ ಕೂಡಿಸುವಂತಹ ಕೆಲಸವನ್ನು ವೀರಶೈವ ಮಹಾಸಭಾ ಮಾಡಿಲ್ಲ ಎಂದಿದ್ದಾರೆ. ಈವರೆಗೂ ವೀರಶೈವ ಪರಂಪರೆ, ಬಸವಣ್ಣನ ಪರಂಪರೆ ಜಗಳಗಳಿವೆ. ಈಗಲೂ ಸಮಾಜ ಒಡೆಯುವ ಕೆಲಸವನ್ನೇ ಮಹಾಸಭಾ ಮಾಡುತ್ತಿದೆ. ನಮಗೆ 2ಡಿ ಕೊಟ್ಟಿದಾರೆ
ರಾಜ್ಯ ಸರ್ಕಾರ ನೋಟಿಫಿಕೇಷನ್‌ ಮಾಡಿದೆ ಎಂದು ಅವರು, ಎಲ್ಲಾ ಸಮುದಾಯಕ್ಕೂ ನಾವು ನ್ಯಾಯ ಕೊಡುವ ಕೆಲಸ‌ ಮಾಡಿದ್ದೇವೆ. ಈಗ ಠರಾವು ಮಾಡುವ ಅವಶ್ಯಕತೆ‌ ಏನಿಲ್ಲ ಎಂದು ಹೇಳಿದ್ದಾರೆ.

Megha News