Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

State News

ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ, ರಾಯಚೂರಿನಲ್ಲಿ ಗೋಕಾಕ ಚಳುವಳಿ ಕಾರ್ಯಕ್ರಮ ಆಯೋಜನೆಗೆ ತೀರ್ಮಾನ

ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ, ರಾಯಚೂರಿನಲ್ಲಿ ಗೋಕಾಕ ಚಳುವಳಿ ಕಾರ್ಯಕ್ರಮ ಆಯೋಜನೆಗೆ ತೀರ್ಮಾನ

ಬೆಂಗಳೂರು-ಕನ್ನಡ ಜನ ಚಳವಳಿ, ಕನ್ನಡತನದ ವಿಸ್ತಾರ, ಕನ್ನಡದ ಅರಿವು ವಿಸ್ತರಿಸಿದ ಮಾದರಿಗಳು, ಹೋರಾಟದ ಹಾದಿಯಲ್ಲಿ ರೂಪುಗೊಂಡ ಕನ್ನಡ ಚರಿತ್ರೆಯನ್ನು ಇವತ್ತಿನ ಕನ್ನಡ ಯುವಜನ ಸಮೂಹಕ್ಕೆ ತಲುಪಿಸಲು ಕ್ರಮ ಕೈಗೊಳ್ಳುವ ಅವಶ್ಯಕತೆ ಯಿದ್ದು ಜನೋತ್ಸವ ರೀತಿಯಲ್ಲಿ ಆಚರಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದರುಅವರಿಂದು ವಿಧಾ‌ನಸೌಧ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ಕನ್ನಡ ಭಾಷೆ- ಸಂಸ್ಕೃತಿ- ಸಂಗೀತ- ಸಾಹಿತ್ಯ- ಜನಪದ-ಚರಿತ್ರೆ ಎಲ್ಲದರ ಮಹತ್ವ ಸಾರಲು ಸಿದ್ಧತೆ ಕೈಗೊಳ್ಳಿ. ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟಂಬರ್‌ 30ರ ವರೆಗೆ ಅರ್ಜಿ ಸಲ್ಲಿಸಬಹುದು. 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ.
ಎಲ್ಲಾ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಡೆಯುತ್ತಿದ್ದು, ಹಂಪಿಯಿಂದ ಆರಂಭವಾದ ಕನ್ನಡ ರಥ ಯಾತ್ರೆ ಈಗಾಗಲೇ 28 ಜಿಲ್ಲೆಗಳಲ್ಲಿ ಸಾಗಿದ್ದು, ರಥಯಾತ್ರೆಯ ಸಮಾರೋಪ ಸಮಾರಂಭ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆಸುವ ಕುರಿತು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಕರ್ನಾಟಕ ಸುವರ್ಣ ಸoಭ್ರಮ -50 ಸಮಾರೋಪ ಸಮಾರoಭ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಹ ಇದೇ ಸಂದರ್ಭದಲ್ಲಿ ನಡೆಸುವ ಕುರಿತು ಚರ್ಚಿಸಲಾಯಿತು.
ಮೈಸೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ ಅವರಣದಲ್ಲಿ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪ್ರತಿಮೆ ಸ್ಥಾಪನೆಗೆ ಕಾಮಗಾರಿ ಪ್ರಗತಿ,
ಬಳ್ಳಾರಿಯಲ್ಲಿ ರಂಜಾನ್‌ ಸಾಬ್‌ ಸ್ಮಾರಕ ನಿರ್ಮಾಣ, ಧಾರವಾಡದಲ್ಲಿ ಅದರಗುಂಚಿ ಶಂಕರಗೌಡ ಸ್ಮಾರಕ ನಿರ್ಮಾಣ, ಗದಗದಲ್ಲಿ ಅಂದಾನಪ್ಪ ದೊಡ್ಡ ಮೇಟಿ ಸ್ಮಾರಕ ನಿರ್ಮಾಣದ ಪ್ರಗತಿ ಪರಿಶೀಲಿಸಲಾಯಿತು.
50 ಸಾಧಕ ಮಹಿಳೆಯರ ಕುರಿತು 100 ಪುಟಗಳ 50ಕೃತಿಗಳನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮೂಲಕ ಮುದ್ರಿಸಲು ತಿರ್ಮಾನಿಸಲಾಯಿತು.
ವಿಧಾನಸೌಧ ಆವರಣದಲ್ಲಿ 25ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್‌ 1ರಂದು ಅನಾವರಣ ಮಾಡಲು ಸೂಚಿಸಿದರು.
ರಾಜ್ಯದ ನಾಲ್ಕು ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಮೈಸೂರಿನಲ್ಲಿ ಚಿಂತನಾ ಸಮಾವೇಶ, ರಾಯಚೂರಿಗೆ ಗೋಕಾಕ್‌ ಚಳವಳಿ ಸಂಸ್ಮರಣೆ, ಮಹಾರಾಷ್ಟ್ರದ ಜತ್‌ ತಾಲೂಕಿನಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ ಮತ್ತು ಮಂಗಳೂರಿನಲ್ಲಿ ವಿವಿಧ ಅಕಾಡೆಮಿ ಸಹಯೋಗದಲ್ಲಿ ಬಹುಸಂಸ್ಕೃತಿ ಉತ್ಸವ ಆಯೋಜಸಲು ನಿರ್ಧರಿಸಲಾಯಿತು.
ಕರ್ನಾಟಕ ಸುವರ್ಣ ಸಂಭ್ರಮ- 50ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಮನೆ ಮನೆಯಲ್ಲಿ ಕನ್ನಡ ಬಾವುಟ ವನ್ನು ಹಾರಿಸಲು ಮನವಿ ಮಾಡಲು ತಿರ್ಮಾನಿಸ ಲಾಯಿತು.
ಕರ್ನಾಟಕದ ಬಹು ಸಂಸ್ಕೃತಿ, ಸೌಹಾರ್ದ ಸಂಸ್ಕೃತಿ, ಬಹುತ್ವದ ಕುರಿತು 100 ಪುಸ್ತಕಗ ಳನ್ನು ಸಿದ್ಧಪಡಿಸಲಾಗುತ್ತಿದ್ದು, ಡಿಸೆಂಬರ್‌ ವೇಳೆಗೆ ಬಿಡುಗಡೆ ಮಾಡುವದು, ನಾಡಿನ ಕಲೆ, ಸಾಹಿತ್ಯ, ಕೃಷಿ, ತೋಟಗಾರಿಕೆ, ಕೈಗಾರಿಕೆ ಕುರಿತಾದ 5 ಸಂಪುಟಗಳನ್ನು ಸಿದ್ಧಪಡಿಸಲಾ ಗುತ್ತಿದೆ. ಇದೇ ಸಂದರ್ಭದಲ್ಲಿ ಸ್ಮರಣ ಸಂಭ್ರಮ ಸಂಪುಟ ಹೊರತರಲು ತಿರ್ಮಾನಿಸಲಾಯಿತು.
ಕನ್ನಡದ ಸಾಹಿತಿಗಳ ನುಡಿಮುತ್ತುಗಳನ್ನು ಎಲ್ಲಾ ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ, ಕೆಎಸ್‌ಆರ್‌ಟಿಸಿ ಬಸ್‌ ಮತ್ತಿತರ ಕಡೆಗಳಲ್ಲಿ ಪ್ರಚುರಪಡಿಸುವದು,

ಎಲ್ಲಾ ಶಾಲಾ ಕಾಲೇಜುಗಳಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ಕ್ರಮಕೈಗೊಳ್ಳಬೇಕೆಂದು ಸಿಎಂ ಸೂಚಿಸಿದರು, ಕೊರಗ ಭಾಷೆಯಂತಹ ಸಣ್ಣ ಭಾಷೆಗಳ ಅಭಿವೃದ್ದಿಗೆ ಕ್ರಮ ಕೈಗೊಳ್ಳಲು ತಜ್ಞರ ಸಮಿತಿ ರಚಿಸುವಂತೆ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮನವಿ ಮಾಡಿದರು.
ಕನ್ನಡ ಮತ್ತು ಸoಸ್ಕೃತಿ ಇಲಾಖೆ ಸಚಿವ ಶಿವರಾ ಜ ತoಗಡಗಿ, ಗೃಹ ಸಚಿವ ಜಿ.ಪರಮೇಶ್ವರ್‌, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಎಸ್.ಆರ್. ಉಮಾಶಂಕರ್‌, ಇಲಾಖಾ ಕಾರ್ಯದರ್ಶಿ ಅಜಯ ನಾಗಭೂಷಣ್, ವಿವಿಧ ಪ್ರಾಧಿಕಾರ ಹಾಗೂ ಅಕಾಡೆಮಿಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

 

Megha News