Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ರೈತರಿಗೆ ಆಸರೆಯಾಗುವ ಸಂಶೋಧನೆಗಳನ್ನು ಕೈಗೊಳ್ಳಿ: ಡಾ.ಪಿ.ಎಲ್.ಪಾಟೀಲ

ರೈತರಿಗೆ ಆಸರೆಯಾಗುವ ಸಂಶೋಧನೆಗಳನ್ನು ಕೈಗೊಳ್ಳಿ: ಡಾ.ಪಿ.ಎಲ್.ಪಾಟೀಲ

ರಾಯಚೂರು. ಕೃಷಿ ವಿಶ್ವವಿದ್ಯಾಲಯಗಳು ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸದಾ ಸ್ಪಂದಿಸಬೇಕು. ಹವಾಮಾನ ವೈಪರೀತ್ಯ ಮತ್ತು ನೈಸರ್ಗಿಕ ಸಂಪನ್ಮೂಲಗಳ ಕ್ಷೀಣಿಸುವಿಕೆಗಳು ಇತ್ತೀಚಿನ ದಿನಗಳಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು. ಆದ್ದರಿಂದ, ಕೃಷಿ ವಿಶ್ವವಿದ್ಯಾಲಯಗಳ ವಿಜ್ಞಾನಿಗಳು ಅದರಲ್ಲೂ ಯುವ ಸಂಶೋಧನಾ ವಿದ್ಯಾರ್ಥಿಗಳು ಇಂತಹ ಅತಿವೃಷ್ಟಿ ಮತ್ತು ಅನಾವೃಷ್ಠಿಗಳನ್ನು ಅರಿತುಕೊಂಡು ಅವುಗಳ ನಿರ್ವಹಣೆಗೆ ಸ್ಪಂದನೆಯಾಗುವ ಸಂಶೋಧನೆಗಳನ್ನು ಕೈಗೊಂಡು ರೈತಬಾಂಧವರಿಗೆ ಸದಾ ಆಸರೆಯಾಗಬೇಕೆಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಪಿ.ಎಲ್.ಪಾಟೀಲ ಅವರು ಹೇಳಿದರು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ನಿರ್ದೇಶನಾಲಯದಡಿ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿ ಪಡೆಯುವ ಅಂತಿಮ ಘಟ್ಟದಲ್ಲಿರುವ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ 4ನೇ ರಾಷ್ಟ್ರೀಯ ಸ್ನಾತಕೋತ್ತರ ಸಂಶೋಧನಾ ಸಮ್ಮೇಳನಕ್ಕೆ ಚಾಲನೆ ನೀಡಿ, ಮಾತನಾಡಿದರು.

ವಿಶ್ವವಿದ್ಯಾಲಯಗಳೂ ಕೂಡ ಯುವ ವಿಜ್ಞಾನಿಗಳನ್ನು ತಯಾರು ಮಾಡಬೇಕೆಂದು ಕರೆ ಕೊಟ್ಟರು. ಎರಡನೆಯದಾಗಿ, ಮಣ್ಣಿನ ಕ್ಷೀಣಿಸುವಿಕೆ ಜೊತೆಗೆ ನೀರಿನ ಅಭಾವ ಇವೆರಡನ್ನು ನಿರ್ವಹಿಸಿಕೊಂಡು ಹೋಗುವಂತಹ ಜೈವಿಕ ವೈವಿದ್ಯಯತೆಯನ್ನು ಕಾಪಾಡಿಕೊಳ್ಳುವಲ್ಲಿ ಹತ್ತಿರವಾಗುವ ಸಂಶೋಧನೆಗಳನ್ನು ಕೈಗೊಳ್ಳಲು ಕಿವಿಮಾತು ಹೇಳಿದರು. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳು ಕೃಷಿ ಶಿಕ್ಷಣ ಮತ್ತು ಅದಕ್ಕೆ ಸಂಬಂಧಿಸಿದ ಪಠ್ಯ ವಿಷಯಗಳನ್ನು ಆಗಿಂದಾಗ್ಗೆ ಪರಾಮರ್ಶಿಸಿ ಕೃಷಿ ಶಿಕ್ಷಣದಲ್ಲಿ ಸುಧಾರಣೆಗಳನ್ನು ತರಬೇಕೆಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಕೃಷಿಯ ಹೊಂದಾಣಿಕೆಗೆ ಮತ್ತು ನಾವಿನ್ಯತೆಗಳನ್ನು ಬಳಸಿಕೊಳ್ಳುವುದು ಅವಶ್ಯಕತೆಯಾಗಿದ್ದು, ಇಂತಹ ಮಾಹಿತಿಗಳನ್ನು ರೈತರಿಗೂ ತಲುಪಿಸಬೇಕಾದ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು. ಆದ್ದರಿಂದ, ಸ್ನಾತಕೋತ್ತರ ಮತ್ತು ಡಾಕ್ಟರೇಟ್ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳು ಕೃಷಿ ರಂಗದ ಬೇಡಿಕೆಗಳನ್ನು ಗ್ರಹಿಸಿಕೊಂಡು, ಆ ದಿಸೆಯಲ್ಲಿ ಚಿಂತಿಸಿ, ಕೊರತೆಗಳ ಬಗ್ಗೆ ವಿಶ್ಲೇಷಿಸಿ ಅರ್ಥಪೂರ್ಣವಾದ ಸಂಶೋಧನಾತ್ಮಕ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳಬೇಕೆಂದರು. ಈ ಸಮ್ಮೇಳನದ ಗುರಿಯು ವಿದ್ಯಾರ್ಥಿಗಳನ್ನು ತಮ್ಮ ಸಂಶೋಧನೆಯ ತಿರುಳನ್ನು ಸಮರ್ಥವಾಗಿ ವ್ಯಕ್ತಪಡಿಸಲು ಸೂಕ್ತ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಸಮಾರಂಭದ ಅಧ್ಯಕ್ಷತೆಯನ್ನು ಕುಲಪತಿಗಳಾದ ಡಾ.ಎಂ. ಹನುಮಂತಪ್ಪ ಅವರು ವಹಿಸಿ ಮಾತನಾಡಿ, ರೈತರ ಅಭ್ಯುದಯವನ್ನಿಟ್ಟುಕೊಂಡು ವಿದ್ಯಾರ್ಥಿಗಳು ಸಂಶೋಧನೆಗಳನ್ನು ಕೈಗೊಳ್ಳಬೇಕು. ಹಾಗೂ ಶಿಕ್ಷಕರು ಈ ನಿಟ್ಟಿನಲ್ಲಿ ಮಾರ್ಗದರ್ಶನ ಮಾಡಬೇಕು ಎಂದರು. ಕೃಷಿಯನ್ನು ಲಾಭದಾಯಕವಾಗಿ ಮಾಡುವ ನಿಟ್ಟಿನಲ್ಲಿ ಕೃಷಿ ಹಾಗೂ ಕೃಷಿ ಇಂಜನಿಯರಿAಗ್ ತಾಂತ್ರಿಕತೆಗಳನ್ನು ಸಂಶೋಧಿಸಿ, ಬೆಳೆಸಿ ರೈತರ ಉಪಯೋಗಕ್ಕಾಗಿ ನೀಡಬೇಕು ಎಂದು ನೆರೆದಿದ್ದ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿಜ್ಞಾನಿಗಳಿಗೆ ಕರೆ ನೀಡಿದರು.
ಇಂತಹ ಸಮ್ಮೇಳನಗಳು ಸಂಶೋಧನಾ ವಿದ್ಯಾರ್ಥಿಗಳಲ್ಲಿ ನಿರ್ಭಯ ಹಾಗೂ ದೃಢತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿವೆ ಹಾಗೂ ಈ ನಿಟ್ಟಿನಲ್ಲಿ ರಾಯಚೂರು ಕೃಷಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಹಾಗೂ ರೈತರ ಅಭ್ಯುದಯಕ್ಕೆ ತನ್ನನ್ನು ಮೀಸಲಿಟ್ಟಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ್ದ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ತಿಮ್ಮಣ್ಣ ಸೋಮಪ್ಪ ಚವಡಿ ಅವರು ಮಾತನಾಡಿ, ಸಾಮಾನ್ಯವಾಗಿ ಕೃಷಿ ಶಿಕ್ಷಣಕ್ಕೆ ಬಂದಿರುವ ಇಲ್ಲಿನ ವಿದ್ಯಾರ್ಥಿಗಳು ಕೃಷಿ ಹಿನ್ನಲೆಯಿಂದ ಬಂದಿರುತ್ತಾರೆ. ಹೀಗಾಗಿ ಕೃಷಿಯ ಬಗ್ಗೆ ಇನ್ನೂ ಹೆಚ್ಚಿನಾದಗಿ ತಿಳಿದುಕೊಳ್ಳಲು ಅವರು ಕೌತುಕರಾಗಿರುತ್ತಾರೆ. ಇಂದಿನ ದಿನಮಾನಗಳಲ್ಲಿ ಕೃಷಿಯು ಮಾನ್ಸೂನ್‌ದೊಂದಿಗೆ ಜೂಜಾಟವಾಡುತ್ತಿದೆ. ಮಾತನಾಡದ ಸಸ್ಯ-ಬೆಳೆಗಳಿಗೆ ಸೇವೆ ಸಲ್ಲಿಸುತ್ತಿರುವ ಅವಕಾಶ ವಿದ್ಯಾರ್ಥಿಗಳಿಗೆ ಲಭಿಸಿದೆ. ಇದನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು ಮತ್ತು ಪ್ರಾಮಾಣಿಕತೆಯಿಂದ ಇರಬೇಕು ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿಯ ಸದಸ್ಯರುಗಳಾದ
ಬಸನಗೌಡ ಬ್ಯಾಗವಾಟ, ಮಲ್ಲಿಕಾರ್ಜುನ ಡಿ., ಮಲ್ಲೇಶ ಕೊಲಿಮಿ, ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಡಾ. ಬಿ. ವಿ. ಪಾಟೀಲ, ದಿವಂಗತ ಡಾ. ಎಸ್. ಎ. ಪಾಟೀಲ ಅವರ ಧರ್ಮಪತ್ನಿ ಶ್ರೀಮತಿ ಅನ್ನಪೂರ್ಣ ಎಸ್. ಪಾಟೀಲ, ನಿವೃತ್ತ ಶಿಕ್ಷಣ ನಿರ್ದೇಶಕರಾದ ಡಾ. ಎಂ. ಜಿ. ಪಾಟೀಲ, ವಿಶ್ವವಿದ್ಯಾಲಯದ ಸ್ನಾತಕೊತ್ತರ ವಿಭಾಗದ ಡೀನ್ ಹಾಗೂ ಈ ಸಮ್ಮೇಳನದ ಸಂಘಟನಾ ಕಾರ್ಯದರ್ಶಿಯಾದ ಡಾ. ಗುರುರಾಜ ಸುಂಕದ, ಡಾ. ಮಹಾದೇವಸ್ವಾಮಿ ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲಾ ಅಧಿಕಾರಿವೃಂದ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Megha News