Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ನಾನು ಸೂಪರ್ ಸಿಎಂ ಅಲ್ಲ, ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ

ನಾನು ಸೂಪರ್ ಸಿಎಂ ಅಲ್ಲ, ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ

ಸಿಂಧನೂರು:ಪ್ರತಿಪಕ್ಷಗಳ ಮುಖಂಡರುಗಳು ಮಾಡುವ ಆರೋಪದಲ್ಲಿ ಹುರುಳಿಲ್ಲ. ನಾನೊಬ್ಬ ಮಾಜಿ ಶಾಸಕನಾಗಿ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ಸರ್ಕಾರದ ಕೆಲಸ ಮಾಡಿಸಿಕೊಡುತ್ತಿರುವೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಹೇಳಿದರು.
ಅವರು ನಗರದ ಕಾಕತೀಯ ಕ್ಲಬ್ ನಲ್ಲಿ ಸುದ್ದಿಗೋಷ್ಠಿನಡೆಸಿ ಮಾತನಾಡಿದರು. ಪ್ರತಿಪಕ್ಷದವರು ಆರೋಪ ಮಾಡಲು ನಿಸ್ಸೀಮರು. ಸಾಕ್ಷಿ ಆಧಾರವಿಲ್ಲದೇ ಆರೋಪ ಮಾಡುವುದು ಸರಿಯಲ್ಲ ಎಂದ ಅವರು, ಚುನಾವಣೆಯಲ್ಲಿ ಕೊಟ್ಟ ಭರವಸೆಗಳನ್ನು ಕಾಂಗ್ರೆಸ್ ಪಕ್ಷ ಈಡೇರಿಸಿದೆ. ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ ಎಂದರು.
ಮುಂಬರುವ ಲೋಕಸಭೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಸ್ಕಿ ಶಾಸಕರಾದ ಅನಿಲ್ ಚಿಕ್ಕಮಾದು, ಆರ್.ಬಸನಗೌಡ ತುರ್ವಿಹಾಳ, ಮುಖಂಡರಾದ ರಾಜಶೇಖರ ಹಿಟ್ನಾಳ, ಹನುಮಂತಪ್ಪ ಮುದ್ದಾಪುರ, ನಿರುಪಾದೆಪ್ಪ ಗುಡಿಹಾಳ, ಸೋಮನಗೌಡ ಬಾದರ್ಲಿ, ಖಾಜಿಮಲಿಕ್ ವಕೀಲ, ಮಲ್ಲಿಕಾರ್ಜುನ ಯದ್ದಲದಿನ್ನಿ, ಹನುಮೇಶ ಬಾಗೋಡಿ, ವೈ.ಅನಿಲ್ ಕುಮಾರ್, ಶೇಖರಪ್ಪ ಗಿಣಿವಾರ, ವೆಂಕಟೇಶ ದತ್ತುರಾವ್, ಆಲಂಭಾಷಾ ಸೇರಿದಂತೆ ಅನೇಕರು ಇದ್ದರು.

Megha News