Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

Local News

ಶಿಕ್ಷಣ, ಆರೋಗ್ಯ ಮತ್ತು ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲು ಸಿಎಂ ಮೇಲೆ ಒತ್ತಡ ಹೇರಲು ಸಂಸದರಿಗೆ ಮನವಿ

ಶಿಕ್ಷಣ, ಆರೋಗ್ಯ ಮತ್ತು ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲು ಸಿಎಂ ಮೇಲೆ ಒತ್ತಡ ಹೇರಲು ಸಂಸದರಿಗೆ ಮನವಿ

ರಾಯಚೂರು. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಶಿಕ್ಷಣ, ಆರೋಗ್ಯ ಮತ್ತು ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲು ಮುಖ್ಯ ಮಂತ್ರಿಗಳ ಮೇಲೆ ಒತ್ತಡ ಹೇರಲು ಪ್ರಗತಿಪರ ಸಂಘಟನೆಗಳ ಜಂಟಿ ಸಮಿತಿ ನಿಯೋಗದಿಂದ ಸಂಸದ ಜಿ ಕುಮಾರ ನಾಯಕರಿಗೆ ಮನವಿ ಸಲ್ಲಿಸಿತು.

ಸಂಸದರ ಕಚೇರಿಯಲ್ಲಿ ಅಭಯ ಅವರ ನೇತೃತ್ವ ದಲ್ಲಿ ಭೇಟಿ ಮಾಡಿ ನಿಯೋಗ ಕಲ್ಯಾಣ ಕರ್ನಾಟ ಕದ ಏಳು ಜಿಲ್ಲೆಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಸುಮಾರು 35 ಲಕ್ಷ ಮಹಿಳೆಯರು ಹಾಗೂ ಬಾಲಕಿಯರು ರಕ್ತಹೀನತೆಯ ಸಮಸ್ಯೆಗೆ ಗುರಿಯಾಗಿದ್ದಾರೆ. ಸುಮಾರು 20 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ.
ಇಂಥ ವಿಷಮ ಪರಿಸ್ಥಿತಿಯಲ್ಲಿ ವಿಭಾಗದ ಆರೋಗ್ಯ ಮತ್ತು ಶಿಕ್ಷಣ, ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ವಿಶೇಷ ಆದ್ಯತೆ ನೀಡುವ ಅಗತ್ಯವಿದೆ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡುವ ಶಿಕ್ಷಣ ಮತ್ತು ಆರೋಗ್ಯದ ವಿಷಯ ದಲ್ಲಿ ಸಮಗ್ರ ಯೋಜನೆ ರೂಪಿಸುವ ಅಗತ್ಯ ತೆಯ ಬಗ್ಗೆ ಮನವರಿಕೆ ಮಾಡುವಂತೆ ಒತ್ತಾಯಿಸಿದರು.
ಈ ಭಾಗದ ಜನಪ್ರತಿನಿಧಿಗಳ ನಿಯೋಗ ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ತಮ್ಮ ಬೇಡಿಕೆಗಳ ಬಗ್ಗೆ ಮನವರಿಕೆ ಮಾಡುವಂತೆ ಕೇಳಿದವರು. ನೂರು ಜಿಲ್ಲೆಗಳ ವಾಸ್ತು ಪರಿಸ್ಥಿತಿ ಹರಿಯುವ ತಜ್ಞರ ತಂಡ ಮತ್ತು ಇದಕ್ಕೆ ಪರ್ಯಾಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು‌.

Megha News