Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Local News

ಪಂಚ ರಾಜ್ಯ ಚುನಾವಣೆಯಲ್ಲಿ 3 ರಾಜ್ಯದಲ್ಲಿ ಬಿಜೆಪಿ ಜಯ ಪಟಾಕಿ ಸಂಭ್ರಮಾಚರಣೆ

ಪಂಚ ರಾಜ್ಯ ಚುನಾವಣೆಯಲ್ಲಿ 3 ರಾಜ್ಯದಲ್ಲಿ ಬಿಜೆಪಿ ಜಯ ಪಟಾಕಿ ಸಂಭ್ರಮಾಚರಣೆ

ರಾಯಚೂರು. ನಗರದ ಡಾ.ಬಿ.ಆರ್ ಅಂಬೇ ಡ್ಕರ್ ವೃತದಲ್ಲಿ ಪಂಚರಾಜ್ಯ ಚುನಾವಣೆಗಳಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನಲೆಯಲ್ಲಿ ಅಂಬೇಡ್ಕರ್ ಅವರ ಮೂರ್ತಿಗೆ ಶಾಸಕ ಡಾ ಎಸ್ ಶಿವರಾಜ್ ಪಾಟೀಲ್ ನೇತೃ ತ್ವದಲ್ಲಿ ಮಾಲಾರ್ಪಣೆ ಮಾಡಿ ಸಂಭ್ರಮಾಚರಣೆ ಮಾಡಲಾಯಿತು.

ಪಂಚ ರಾಜ್ಯದಲ್ಲಿ 3 ರಾಜ್ಯದಲ್ಲಿ ಬಿಜೆಪಿ ಜಯ ಗಳಿಸಿದ್ದು, ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಅಧ್ಯಕ್ಷ ಬಿ ಗೋವಿಂದ, ಬಿಜೆಪಿ ಹಿರಿಯ ಮುಖಂಡ ಎನ್ ಶಂಕ್ರಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಂಕರ್ ರೆಡ್ಡಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜಂಬಣ್ಣ ಮಲ್ದಕಲ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶಾನಬಾಳ, ಬಿಜೆಪಿ ಮುಖಂಡ ರವೀಂದ್ರ ಜಾಲ್ದಾರ್, ಬಿಜೆಪಿ ನಗರ ಉಪಾಧ್ಯಕ್ಷ ಜೆ ಎಂ ಮೌನೇಶ್, ನಗರ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೆ ಬಿ ಪಾಪುರಾವ್, ನಗರ ಮಹಿಳಾ ಮೋರ್ಚಾದವರು ಹಾಗೂ ಪಕ್ಷದ ಅನೇಕ ಮುಖಂಡರು ಹಾಗೂ ಪಕ್ಷದ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

Megha News