Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ಅಕ್ರಮ ಪಡಿತರ ಅಕ್ಕಿ ಸಾಗಾಣೆ ಆಲ್ದಾಳ ವೀರಭದ್ರಪ್ಪರಿಗೆ ಸೇರಿದ ವಾಹನ ವಶಕ್ಕೆ ಆಹಾರ ಇಲಾಖೆ ಅಧಿಕಾರಿಗಳು ದೂರು ನೀಡಲು ಹಿಂದೇಟು

ಅಕ್ರಮ ಪಡಿತರ ಅಕ್ಕಿ ಸಾಗಾಣೆ ಆಲ್ದಾಳ ವೀರಭದ್ರಪ್ಪರಿಗೆ ಸೇರಿದ ವಾಹನ ವಶಕ್ಕೆ ಆಹಾರ ಇಲಾಖೆ ಅಧಿಕಾರಿಗಳು ದೂರು ನೀಡಲು ಹಿಂದೇಟು

ಸಿಂಧನೂರು. ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನಗರದ ಯಲ್ಲಮ್ಮ ದೇವಸ್ಥಾನದ ಸಮೀಪ ಬೊಲಿರೋ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ವೇಳೆ ಪೋಲಿಸರು ದಾಳಿ ನಡೆಸಿ ವಾಹನವನ್ನು ವಶಪಡಿಸಿಕೊಂ ಡಿದ್ದಾರೆ‌.
ಬೊಲೊರೋ ವಾಹನದ ಚಾಲಕ ಹುಸೇನ್ ಸಾಬ್ ರನ್ನು ವಿಚಾರಣೆ ನಡೆಸಿದ ವೇಳೆ ಅಕ್ರಮ ಪಡಿತರ ಮಾನವಿಯ ಆಲ್ದಾಳ ವೀರಭದ್ರಪ್ಪ ಎನ್ನುವವರಿಗೆ ಸೇರಿದೆ ಎಂದು ಮಾಹಿತಿ ನೀಡಿದ್ದಾರೆ. ಅಕ್ರಮ ಪಡಿತರ ಅಕ್ಕಿ ಸಾಗಾಣೆ ಕುರಿತು ಆಹಾರ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪಂಚನಾಮೆ ಮಾಡಲು ಹಿಂದೆಟು ಹಾಕಿದ್ದಾರೆ. ಆಹಾರ ಇಲಾಖೆ ಅಧಿಕಾರಿಗಳು ಅಕ್ರಮ ಪಡಿತರ ಅಕ್ಕಿ ಸಾಗಾಣೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಕುರಿತು ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಸುಧೀರ್ ಬೆಂಕಿ ಅವರು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿ ಆಹಾರ ಇಲಾಖೆ ಅಧಿಕಾರಗಳು ದೂರು ನೀಡಿದರೆ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Megha News