Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ರಾಯಚೂರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರಸಭೆ ಪೌರಾಯಕ್ತ ಗುರು ಸಿದ್ದಯ್ಯ ಹಿರೇಮಠ ಅವರನ್ನು ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆಯ ಆದೀನ ಕಾರ್ಯದರ್ಶಿ ಜೆ.ತಿರುಮಲಚಾರ್ ಅವರು ಆದೇಶಿಸಿದ್ದಾರೆ.

ತೆರವಾದ ಸ್ಥಾನಕ್ಕೆ ರಾಣೆಬೆನ್ನೂರಿನ ನಗರಸಭೆ ಪೌರಾಯುಕ್ತ ನಿಂಗಪ್ಪ ಎಚ್ ಕುಮ್ಮಣ್ಣನವರ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.
ಪೌರಾಡಳಿತ ಇಲಾಖೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಯೋಜನಾ ನಿರ್ದೇಶಕರು, ನಗರಸಭೆಯ ಪೌರಾಯಕ್ತರು ಒಟ್ಟು 13 ಜನರನ್ನು ವರ್ಗಾ ವಣೆ ಮಾಡಿ ಆದೇಶಿದ್ದಾರೆ.
ಸ್ವಂತ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಮೂರು ವರ್ಷಕ್ಕೂ ಮೇಲ್ಪಟ್ಟು ಒಂದೇ ಜಿಲ್ಲೆಯಲ್ಲಿ ಕೆಲಸ ಮಾಡುತಿರುವವರನ್ನು
ವರ್ಗಾವಣೆ ಮಾಡಲಾಗಿದೆ.
ನಗರಸಭೆ ಪೌರಾಯುಕ್ತ ಗುರುಸಿದ್ದಯ್ಯ ಅವರಿಗೆ ಯಾವುದೇ ಸ್ಥಳ ಗುರುತಿಸದೇ ಇದ್ದು ಮುಂದಿನ ಆದೇಶವರೆಗೆ ಪ್ರಾಧಿಕಾರಕ್ಕೆ ವರದಿ ಮಾಡಿಕೊಳ್ಳು
ವಂತೆ ಸೂಚಿಸಿದ್ದಾರೆ.

Megha News