Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸದ ಜಿಪಂ ಅಧಿಕಾರಿಗಳು, ನರೇಗಾ ತನಿಖೆ ಬಂದ ಅಧಿಕಾರಿಗಳಿಗೆ ಗ್ರಾಮಸ್ಥರು ಸುತ್ತುವರೆದು ತರಾಟೆಗೈದರು

ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸದ ಜಿಪಂ ಅಧಿಕಾರಿಗಳು, ನರೇಗಾ ತನಿಖೆ ಬಂದ ಅಧಿಕಾರಿಗಳಿಗೆ ಗ್ರಾಮಸ್ಥರು ಸುತ್ತುವರೆದು ತರಾಟೆಗೈದರುOplus_131072

ರಾಯಚೂರು. ಕುಡಿಯುವ ನೀರಿನ ಸಮಸ್ಯೆ ಸೇರಿ ವಿವಿಧ ಬೇಡಿಕೆ ಈಡೇರಿಸುಂತೆ ಮನವಿ ಮಾಡಿದರೂ ಸ್ಪಂದಿಸದೇ ಇರುವುದರಿಂದ ಆಕ್ರೋಶಗೊಂಡಿ ಗ್ರಾಮಸ್ಥರು ನರೇಗಾ ಕಾಮಗಾರಿ ವೀಕ್ಷಣೆ ಮಾಡಲು ಬಂದಿದ್ದ ಅಧಿಕಾರಿಗಳ ತಂಡದ ಮೇಲೆ ದಾಳಿ ನಡೆಸಿದ ಘಟನೆ ಮಸ್ಕಿ ತಾಲೂಕಿನ ಬೆಂಚಮರಡಿ ಗ್ರಾಮದಲ್ಲಿ ನಡೆದಿದೆ.

ಬೆಂಚಮರಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಹಲವು ಬಾರಿ ಜಿಲ್ಲಾ ಪಂಚಾಯತ ಹಾಗೂ ಸಂಭವಿಸಿದ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರೂ ಬೇಸಿಗೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿ ಮೀರಿದ್ದರಿಂದ ಗ್ರಾಮಸ್ಥರು ಆಕ್ರೋಶಗೊಂಡಿದ್ದರು.
ಇದೇ ವೇಳೆ ಗ್ರಾಮಕ್ಕೆ ಬಂದಿದ್ದ ಉದ್ಯೋಗ ಖಾತ್ರಿ ತನಿಖಾ ತಂಡದ ಅಧಿಕಾರಿಗಳನ್ನು ಗ್ರಾಮಸ್ಥರು ಸುತ್ತುವರಿದು ತರಾಟೆಗೆ ತೆಗೆದುಕೊಂಡರು.
ಜಿಲ್ಲಾ ಪಂಚಾಯಿತಿ ನರೇಗಾ ಯೋಜನೆಯ ನಿರ್ದೇಶಕ ಶರಣ ಬಸಪ್ಪ, ಮಸ್ಕಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ, ಪಿಡಿಒ ಕೃಷ್ಣ ಹನುಗುಂದ ಮತ್ತು ಕೇಂದ್ರ ತಂಡದ ಅಧಿಕಾರಿ ಪಿ.ಶಿವಶಂಕರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದಲ್ಲಿ ಯಾವುದೇ ಸಮಸ್ಯೆಗಳಿಗೆ ಜಿಲ್ಲಾ ಪಂಚಾಯತ ಇಲಾಖೆ ಅಧಿಕಾರಿಗಳು ಸ್ಪಂದಿಸುವ ಕೆಲಸ ಮಾಡಿಲ್ಲ, ಇದೀಗ ಗ್ರಾಮಕ್ಕೆ ಬಂದ
ಕೇಂದ್ರ ತಂಡದ ಅಧಿಕಾರಿಗಳು ಹಾಗೂ ಗ್ರಾಮಸ್ಥರು ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆಯಿತು. ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದರಿಂದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದರು.
ಪರಿಸ್ಥಿತಿ ಉದ್ವಿಗ್ನಗೊಂಡಿತ್ತು ನೀರು ಕೇಳಿದರೆ ಬಂಧಸಿತ್ತೀರಿ ಎಂದು ಎಲ್ಲರನ್ನೂ ಬಂಧಿಸಿ ಎಂದು ಪೋಲಿಸ್ ವಾಹನದಲ್ಲಿ ನುಗ್ಗಿದರು, ಇಬ್ಬರನ್ನು ವಶಕ್ಕೆ ಪಡೆದು ಕರೆದುಕೊಂಡು ಹೋದರು, ಇತ್ತ ಅಧಿಕಾರಿಗಳು ಗ್ರಾಮದಿಂದ ಹೊರಟು ಹೋದರು.

Megha News