Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Politics NewsState News

ಕೇಂದ್ರ‌ ಸರ್ಕಾರ ಬಿಜೆಪಿಯೇತರ ಸರ್ಕಾರ ಕೆಡವಲು ಹುನ್ನಾರ-ಬೋಸರಾಜು

ಕೇಂದ್ರ‌ ಸರ್ಕಾರ ಬಿಜೆಪಿಯೇತರ ಸರ್ಕಾರ ಕೆಡವಲು ಹುನ್ನಾರ-ಬೋಸರಾಜು

ರಾಯಚೂರು: ಕೇಂದ್ರ‌ ಸರ್ಕಾರ ಬಿಜೆಪಿಯೇತರ ಸರ್ಕಾರ ಕೆಡವಲು ಹುನ್ನಾರ ನಡೆಸಿದ್ದು ರಾಜ್ಯ ಸರ್ಕಾರ ಕ್ಕೆ ಟಾರ್ಗೆಟ್ ಮಾಡಿ ಮುಡಾ ಹಗರಣ ವನ್ನು ದೊಡ್ಡದು ಮಾಡುತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ.ಬಿಜೆಪಿ ನಾಯಕರು ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದು ಸಚಿವ ಎನ್ ಎಸ್ ಬೋಸರಾಜು ಹೇಳಿದರು.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಚ್ ಡಿ ಕುಮಾರಸ್ವಾಮಿಗೆ ಕೇಂದ್ರದಿಂದ ಅನುದಾನ ತಂದು ರಾಜ್ಯದ ಅಭಿವೃದ್ಧಿ ಮಾಡುವುದನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಅಧಿಕಾರದಿಂದ‌ ಕೆಳಗಿಸಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಜನಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ನಿವೇಶನ ಹಗರಣ ನಡೆದಿದೆ ಎಂದು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ.
ಬಿಜೆಪಿ, ಜೆಡಿಎಸ್ ನಾಯಕರಿಗೆ ಜನರ ಬಗ್ಗೆ ಕಾಳಜಿಯಿಲ್ಲ. 70 ವರ್ಷದಲ್ಲಿ ಕಾಣದಂತಹ ಕಲುಷಿತ ರಾಜಕಾರಣ‌ ಮಾಡುತ್ತಿದ್ದಾರೆ. ಜನಾರ್ಧ ನ‌ರೆಡ್ಡಿ, ಆರ್ ಆಶೋಕ, ಬಿಎಸ್ ವೈ ಅವರ ಮೇಲೆ ಕೇಸ್ ದಾಖಲಾಗಿದೆ. ಸಿದ್ದರಾಮಯ್ಯ ಅವರ ವಿರುದ್ದ ಯಾವುದೇ ಅರೋಪ, ಪ್ರಕರಣಗಳಿಲ್ಲ ಎಂದರು.

Megha News