Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಲಿಂಗಾಯತರು, ಒಕ್ಕಲಿಗರು, ಜಾತಿ ಜನಗಣತಿ ವಿರೋಧ, ಸಮಾಜದ ಬಗ್ಗೆ ನಿಮಗೆ ಪ್ರೀತಿ ಇದ್ದರೆ, ಪಕ್ಷದಿಂದ ಹೊರಬಂದು ರಾಜೀನಾಮೆ ಕೊಡಿ

ಲಿಂಗಾಯತರು, ಒಕ್ಕಲಿಗರು, ಜಾತಿ ಜನಗಣತಿ ವಿರೋಧ, ಸಮಾಜದ ಬಗ್ಗೆ ನಿಮಗೆ ಪ್ರೀತಿ ಇದ್ದರೆ, ಪಕ್ಷದಿಂದ ಹೊರಬಂದು ರಾಜೀನಾಮೆ ಕೊಡಿ

ರಾಯಚೂರು.ಲಿಂಗಾಯತರು, ಒಕ್ಕಲಿಗರು ಜಾತಿ ಜನಗಣತಿ ವಿರೋಧಿಸುತ್ತಿದ್ದಾರೆ, ರಾಜಕಾರಣಿಗಳಿಗೆ ನಿಮ್ಮ ಸಮಾಜದ ಬಗ್ಗೆ ನಿಮಗೆ ಪ್ರೀತಿ ಇದ್ದರೆ, ಪಕ್ಷದಿಂದ ಹೊರಬಂದು ರಾಜೀನಾಮೆ ಕೊಡಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರ, ಜಾತಿ ಜನಗಣತಿ ಬಿಜೆಪಿಯ ನಿಲುವಾಗಿದೆ, ಆದರೆ, ಸಿದ್ದರಾಮ ಯ್ಯ ಸಿಎಂ ಆಗಿ ಇಷ್ಟು ವರ್ಷ ಆಯ್ತು ಯಾಕೆ ಜಾತಿ ಜನಗಣತಿ ಬಿಡುಗಡೆ ಮಾಡ್ತಿಲ್ಲ ಎಂದು ಹರಿಹಾಯ್ದರು,
ಕಾಂಗ್ರೆಸ್ ನವರು ಮಾಡಿದ ಕಿತಾಪತಿಯಿಂದ,
ಈಗ ಸ್ವಾಮೀಜಿ ಯಾವ ಜಾತಿಯವರು ಎಂದು ನೋಡಬೇಕಿದೆ, ಅವರವರ ಜಾತಿ ಪರವಾಗಿ ಸ್ವಾಮಿಗಳು ಇದ್ದಾರೆ, ಆದರೆ ಇದೀಗ ಎಲ್ಲಾ ಜಾತಿಗಳ ಎಲ್ಲಾ ಸ್ವಾಮಿಗಳು ಈಗ ಎದ್ದು ಕೂತಿದ್ದಾರೆ ಎಂದು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರು, ದೇವರಾಜು ಅರಸು ಬಿಟ್ರೆ ನಾನೆ ಅಂತಾರೆ ಸಿದ್ದರಾಮಯ್ಯ ಹೇಳುತ್ತಿದ್ದಾರೆ, ಎಂದರು.
ಬಸನಗೌಡ ಪಾಟೀಲ್ ಯತ್ನಾಳ ಸ್ವಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿದ್ದು, ಬಿಜೆಪಿ ಪಕ್ಷ ಆನೇ ಇದ್ದಂತೆ ಗಜ ಗಾಂಬೀರ್ಯದಿಂದ ಹೋಗುವಾಗ ನಾಯಿ ನರಿಗಳು ಬೊಗಳುತ್ತೆ ಎಂದು ಯತ್ನಾಳ ಹೇಳಿಕೆ ವಿರುದ್ದ ಅಸಮಧಾನ ವ್ಯಕ್ತಪಡಿಸಿದರು.
ಯತ್ನಾಳ ಅವರದ್ದೇನು ಹೊಸದಲ್ಲ, ಯಾರನ್ನು ಬಿಟ್ಟಿದ್ದಾರೆ ಅವರು, ಯಡಿಯೂರಪ್ಪ, ಬೊಮ್ಮಾಯಿ, ಶಟ್ಟರ್ ಅವರನ್ನೆ ಬಿಟ್ಟಿಲ್ಲ, ಇಂಥ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೆಜ್ ಆಗಿದೆ, ನಮ್ಮಲ್ಲಿ ತುಂಬಾ ಗುಂಪುಗಾರಿಕೆ ಇಲ್ಲ, ನಾಲ್ಕು ಜನ ಮಾಡಿದ್ದನ್ನು ಗುಂಪುಗಾರಿಕೆ ಅಂದ್ರೆ ಒಪ್ಪಲ್ಲ.
ಯತ್ನಾಳ, ಬೆಲ್ಲದ್, ಸೋಮಣ್ಣ ಅವರಿಗಾದ ಅಸಮಧಾನ ಬಹಿರಂಗ ಹೊರಹಾಕಿದ್ದಾರೆ.
ನಮ್ಮಲ್ಲಿ ತಪ್ಪಿದೆ, ಶಿಸ್ತು ಇಲ್ಲ, ರಿಪೇರಿ ಮಾಡೋಕೆ ಹಿರಿಯರಿದ್ದಾರೆ, ಇವರನ್ನು ಕರೆದು ಗೌರವದಿಂದ ಹೇಳಲಾಗುತ್ತಿದೆ ಎಂದು ತಿಳಿಸಿದರು.

Megha News