Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಕೆಎಸ್‌ಆರ್‌ಟಿಸಿ ಬಸ್‌ – ಶಾಲಾ ವಾಹನ ಅಪಘಾತ; ರಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಮಕ್ಕಳ ಆರೋಗ್ಯ ವಿಚಾರಣೆ

ಕೆಎಸ್‌ಆರ್‌ಟಿಸಿ ಬಸ್‌ – ಶಾಲಾ ವಾಹನ ಅಪಘಾತ; ರಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಮಕ್ಕಳ ಆರೋಗ್ಯ ವಿಚಾರಣೆ

ರಾಯಚೂರು. ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್‌ನ ಗ್ರಾಮದ ಹತ್ತಿರ ಸೆ.05ರ ಗುರುವಾರ ಕೆಎಸ್‌ಆರ್‌ಟಿಸಿ ಬಸ್‌ – ಶಾಲಾ ವಾಹನ ನಡುವೆ ಅಪಘಾತ ಹಿನ್ನಲೆಯಲ್ಲಿ ಇಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ನಗರದ ರಿಮ್ಸ್ ಹಾಗೂ ಸುರಕ್ಷಾ ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸದರು.

ಇದೇ ಸಂದರ್ಭದಲ್ಲಿ ಶಾಸಕರಾದ ಹಂಪಣಗೌಡ, ಎ.ವಸಂತ ಕುಮಾರ್, ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳು, ರಾಯಚೂರು ಸಹಾಯಕ‌ ಆಯುಕ್ತರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ರಿಮ್ಸ್ ನಿರ್ದೇಶಕರು, ಆಡಳಿತಾಧಿಕಾರಿಗಳು ಸೇರದಂತೆ ಇತರೆ ಅಧಿಕಾರಿಗಳು‌ ಇದ್ದರು.

Megha News