Live Stream

February 2025
S M T W T F S
 1
2345678
9101112131415
16171819202122
232425262728  

| Latest Version 9.4.1 |

State News

ಮಾನ್ವಿ, ಸಿರವಾರದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕಂದಾಯ ಸಚಿವರ ಸಕಾರಾತ್ಮಕ ಸ್ಪಂದನೆ: ಸಚಿವ ಎನ್ ಎಸ್ ಬೋಸರಾಜು

ಮಾನ್ವಿ, ಸಿರವಾರದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕಂದಾಯ ಸಚಿವರ ಸಕಾರಾತ್ಮಕ ಸ್ಪಂದನೆ: ಸಚಿವ ಎನ್ ಎಸ್ ಬೋಸರಾಜು

ರಾಯಚೂರು.ಮಾನ್ವಿ ಹಾಗೂ ಸಿರವಾರದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕಂದಾಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಎನ್ ಎಸ್ ಬೋಸರಾಜು ತಿಳಿಸಿದರು.

ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ರಾಯಚೂರು ಜಿಲ್ಲೆಯ ಮಾನ್ವಿ ಹಾಗೂ ಸಿರವಾರ ತಾಲ್ಲೂಕಿನಲ್ಲಿ ಆಡಳಿತ ಭವನಗಳಿಲ್ಲ. ಇದರಿಂದಾಗಿ ಜನರು ಸರಕಾರಿ ಕಚೇರಿಗೆ ಭೇಟಿ ನೀಡುವುದು ತೊಂದರೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾನ್ವಿ ಹಾಗೂ ಸಿರವಾರದಲ್ಲಿ ಮಿನಿ ವಿಧಾನಸೌದ ನಿರ್ಮಾಣಕ್ಕೆ ಅಗತ್ಯ ಅನುಮತಿ ನೀಡಬೇಕು ಎಂದು ಕಂದಾಯ ಸಚಿವರೊಂದಿಗೆ ಚರ್ಚಿಸಿದರು. ಜೊತೆಗೆ ಕಂದಾಯ ಇಲಾಖೆಗೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಸಹ ಸಭೆಯಲ್ಲಿ ಸಚಿವರು ಚರ್ಚಿಸಿದರು. ಕೆಲವು ಸಮಸ್ಯೆಗಳ ಪರಿಹಾರಕ್ಕೆ ಕಂದಾಯ ಸಚಿವರು ಇದೆ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Megha News