Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Crime News

ಪೊಲೀಸರ ವಿಶೇಷ ಕಾರ್ಯಾಚರಣೆ 2 ಕೆಜಿ 5 ತೊಲೆ ಬಂಗಾರ ಜಪ್ತಿ: ಕಳ್ಳನ ಬಂಧನ

ಪೊಲೀಸರ ವಿಶೇಷ ಕಾರ್ಯಾಚರಣೆ 2 ಕೆಜಿ 5 ತೊಲೆ ಬಂಗಾರ ಜಪ್ತಿ: ಕಳ್ಳನ ಬಂಧನ

ಸಿಂಧನೂರು:ಕೋಟಿ ಮೌಲ್ಯದ ಬಂಗಾರದ ಆಭರಣ ಕಳ್ಳತನದ ಪ್ರಕರಣವನ್ನು ಸಿಂಧನೂರು ನಗರ ಪೊಲೀಸರು ಒಂದು ವಾರದಲ್ಲಿಯೇ ವಿಶೇಷ ಕಾರ್ಯಾಚರಣೆ ನಡೆಸಿ, 2 ಕೆಜಿ 5 ತೊಲೆ ಬಂಗಾರದ ಆಭರಣಗಳ ಸಮೇತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ತಿಳಿಸಿದರು.


ಅವರು ನಗರದ ಶಹರ ಪೊಲೀಸ್ ಠಾಣೆಯಲ್ಲಿ ಸೋಮವಾರ ರಾತ್ರಿ ಸುದ್ದಿಗೋಷ್ಠಿನಡೆಸಿ ಮಾಹಿತಿ ನೀಡಿದರು. ಸಿಕಂದರ ಬಾದ್ ಮೂಲದ ಇಬ್ಬರು ಬಂಗಾರ ವ್ಯಾಪಾರಿಗಳಾದ ದರಮೇಶ ಕುಮಾರ್ ಹಾಗೂ ನಿರ್ಮಲ್ ಕುಮಾರ ಜೈನ್ ಎನ್ನುವವರು ಕಮಿಷನ್ ಆಧಾರದ ಮೇಲೆ ಬಂಗಾರ ಮಾರಾಟ ಮಾಡಲು ಸಿಕಂದರಬಾದ್ ನ ಬಂಗಾರ ವ್ಯಾಪಾರಿ ಭರತ್ ಕುಮಾರ್ ಎನ್ನುವವರಿಂದ ಕೋಟ್ಯಾಂತರ ರೂ ಮೌಲ್ಯದ ಬಂಗಾರದ ಆಭರಣಗಳನ್ನು ಅಕ್ಟೋಬರ್ 12 ರಂದು ರಾಯಚೂರು ಜಿಲ್ಲೆಗೆ ತಂದಿದ್ದರು. ಅವರಿಬ್ಬರುವ ಸಿಂಧನೂರು ನಗರದ ಜೈನ್ ಧರ್ಮಶಾಲೆಯ ಕೋಣೆಯೊಂದರಲ್ಲಿ ಬಂಗಾರ ಸಮೇತ ವಾಸ್ತವ್ಯ ಹೂಡಿದ್ದರು. ಮರುದಿನ ಸಿಂಧನೂರಿನ ಹಲವೆಡೆ ಬಂಗಾರ ವ್ಯಾಪಾರ ಮಾಡುವ ಉದ್ದೇಶ ಹೊಂದಿದ್ದರು. ಇದ್ದ ಇಬ್ಬರ ಪೈಕಿ ಬಂಧಿತ ಆರೋಪಿ ನಿರ್ಮಲ್ ಕುಮಾರ್ ಜೈನ್ ದರಮೇಶನಿಗೆ ತಿಳಿಯದಂತೆ ಎಲ್ಲಾ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಮಾನ್ವಿ ಪಟ್ಟಣದ ಬಾಲಾಜಿ ಕಂಪರ್ಟ್ಸ್ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದನು. ನಂತರ ಬಂಗಾರದ ಮೂಲ ಮಾಲೀಕ ಭರತ್ ಕುಮಾರ್ ನಿಗೆ ಬಂಗಾರ ಕಳ್ಳತನವಾದ ವಿಷಯ ತಿಳಿದು ಸಿಂಧನೂರು ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದನು. ಬಹುಕೋಟಿ ಮೌಲ್ಯದ ಬಂಗಾರದ ಕಳ್ಳತನದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಂಧನೂರು ಉಪವಿಭಾಗದ ಡಿವೈಎಸ್ಪಿ ಬಿ.ಎಸ್.ತಳವಾರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ವೈಜ್ಞಾನಿಕ ವಿಧಾನಗಳಿಂದ ಕಳ್ಳನನ್ನು ಪತ್ತೆ ಹಚ್ಚಿ ಆತನಿಂದ ಸಿಕಂದರ ಬಾದ್ ಬಂಗಾರ ಸೇರಿದಂತೆ ವಿವಿದೆಡೆ ಕಳ್ಳತನ ಮಾಡಿದ ಒಟ್ಟು 2 ಕೆಜಿ 5 ತೊಲೆ ಬಂಗಾರದ ಆಭರಣಗಳು ಹಾಗೂ ₹40,150 ರೂ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಬಂಗಾರದ ಆಭರಣಗಳ ಮೌಲ್ಯ 1 ಕೋಟಿ 43 ಲಕ್ಷದ 92 ಸಾವಿರ ರೂಗಳು ಎಂದು ಅಂದಾಜಿಸಲಾಗಿದೆ ಎಂದು ವಿವರಿಸಿದರು.
ನಗರದಲ್ಲಿ ಇತ್ತೀಚೆಗೆ ವಿವಿದೆಡೆ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ವರದಿಗಳ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿ ಸಮೇತ ಬಂಗಾರದ ಆಭರಣಗಳನ್ನು ಹಗಲಿರುಳು ಶ್ರಮಿಸಿ ವಶಪಡಿಸಿಕೊಂಡಿರುವುದಕ್ಕೆ ಇಲಾಖೆವತಿಯಿಂದ ಅಭಿನಂದನೆಗಳು ತಿಳಿಸಿದ ಎಸ್ಪಿ ಅವರು ‘ತನಿಖೆ ನಡೆಸಿದ ಪೊಲೀಸರ ತಂಡಕ್ಕೆ ವಿಶೇಷ ಬಹುಮಾನವನ್ನು ಮುಂದಿನ ಪರೇಡ್ ಸಂದರ್ಭದಲ್ಲಿ ನೀಡಲಾಗುತ್ತದೆ’ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಜಿಲ್ಲಾ ಪೊಲೀಸ್ ಇಲಾಖೆ ಎಲ್ಲಾ ಆಯಾಮಗಳನ್ನು ಜನರ ಸುರಕ್ಷತೆ ಮತ್ತು ರಕ್ಷಣೆಗಾಗಿ ಸದಾ ಬದ್ಧವಾಗಿದ್ದು, ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ಮಧ್ಯೆಯೂ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದೆ. ನಾಗರೀಕ ಸಮಿತಿಗಳನ್ನು ವಿವಿಧ ವಾರ್ಡುಗಳಲ್ಲಿ ರಚಿಸಿ ಸಾರ್ವಜನಿಕರ ಸಹಕಾರವನ್ನು ಇಲಾಖೆ ಪಡೆಯುತ್ತದೆ ಎಂದರು.
ಹೊರವಲಯದಲ್ಲಿ ಕಳ್ಳತನ ಪ್ರಕರಣಗಳು, ಸಂಚಾರ ಸುವ್ಯವಸ್ಥೆ, ನಂಬರ್ ಪ್ಲೇಟ್ (ನೊಂದಣಿ) ಇಲ್ಲದ ವಾಹನಗಳ ಪರಿಶೀಲನೆ ಸೇರಿದಂತೆ ಇಲಾಖೆ ಕೆಲಸ ಮಾಡಲು ಮುಂದಾಗಿದೆ. ಸಾರ್ವಜನಿಕರು ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಸಿಂಧನೂರು ಉಪವಿಭಾಗಧೀಕಾರಿ ಬಿಎಸ್ ತಳವಾರ, ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಸ್ಪೆಕ್ಟರ್ ದುರುಗಪ್ಪ ಡೊಳ್ಳಿನ್, ಪಿಎಸ್ ಐಗಳಾದ ಯರಿಯಪ್ಪ, ಬಸವರಾಜ ಸೇರಿದಂತೆ ಪೊಲೀಸ್ ಪೇದೆಗಳು ಇದ್ದರು.

Megha News