Live Stream

January 2025
S M T W T F S
 1234
567891011
12131415161718
19202122232425
262728293031  

| Latest Version 9.4.1 |

Local News

ಸಿಂಧನೂರಿನಲ್ಲಿ ಕಿಶೋರ ಕಾರ್ಮಿಕನ ರಕ್ಷಣೆ; ಮಾಲೀಕನ ವಿರುದ್ಧ ಪ್ರಕರಣ ದಾಖಲು

ಸಿಂಧನೂರಿನಲ್ಲಿ ಕಿಶೋರ ಕಾರ್ಮಿಕನ ರಕ್ಷಣೆ; ಮಾಲೀಕನ ವಿರುದ್ಧ ಪ್ರಕರಣ ದಾಖಲು

ರಾಯಚೂರು. ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಟಾಸ್ಕ್ ಪೋರ್ಸ್ ಸಮಿತಿಯ ಅಧಿಕಾರಿಗಳಿಂದ ಜಿಲ್ಲೆಯ ಸಿಂಧನೂರು ನಗರದ ವಿವಿಧ ಹೋಟೆಲ್‌ಗಳು, ಕಿರಾಣಿ ಅಂಗಡಿಗಳು, ಬೇಕರಿಗಳು, ಗ್ಯಾರೇಜ್‌ಗಳು, ಬಾರ್ ಆ್ಯಂಡ್ ರೆಸ್ಟೋರೆಂಟ್ ಸೇರಿದಂತೆ ಇನ್ನಿತರೆ ಕಡೆ ಆಗಸ್ಟ್ 08ರ ಗುರುವಾರದಂದು ತಪಾಸಣೆ ಮಾಡಿ, ಒಬ್ಬ ಕಿಶೋರ ಬಾಲಕಾರ್ಮಿಕನ್ನು ರಕ್ಷಣೆ ಮಾಡಿದ್ದು, ಈ ಕುರಿತು ಸಿಂಧನೂರಿನಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಂಧನೂರು ನಗರದ ಹಟ್ಟಿ ರಸ್ತೆಯ, ನ್ಯಾಷನಲ್ ಲೇಜೌಟ್ ವಿರಾಪಾಪುರದ ಮೆ.ಮಂಜುನಾಥ ಬೇಕರಿ ಮಾಲೀಕರಾದ ಅಮೀರ ಅಲಿ ತಂದೆ ಅಮೀನುದ್ದೀನ್ ಅವರ ವಿರುದ್ಧ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯಡಿ ಪ್ರಕರಣ ದಾಖಲೆ ಮಾಡಲಾಗಿದೆ.
ಈ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮಂಜುನಾಥ ರೆಡ್ಡಿ ಅವರು ಮಾತನಾಡಿ, ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 2016ರಂತೆ 14ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಾಗೂ 15ರಿಂದ 18ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ವೇಳೆ ದುಡಿಸಿಕೊಂಡಲ್ಲಿ 50,000 ರೂ.ಗಳ ದಂಡ ಹಾಗೂ 2ವರ್ಷ ಜೈಲು ಶಿಕ್ಷೆ ಇರುತ್ತದೆ ಎಂದರು.
ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ದುಡಿಯುವ ಮಕ್ಕಳು ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ-1098ಗೆ ಮಾಹಿತಿ ನೀಡಬಹುದಾಗಿದೆಂದರು.
ಇದೇ ಸಂದರ್ಭದಲ್ಲಿ ಸಿಂಧನೂರು ಕಾರ್ಮಿಕ ನಿರೀಕ್ಷಕರಾದ ವಿಜಯಲಕ್ಷ್ಮಿ, ಕಂದಾಯ ನಿರೀಕ್ಷಕರಾದ ಲಿಂಗರಾಜ್, ಎಸಿಡಿಪಿಒ ಚಂದ್ರಶೇಖರ, ಶಿಕ್ಷಣ ಇಲಾಖೆಯ ಬಿ.ಆರ್.ಪಿ ಪಂಪಾಪತಿ ಸೇರಿದಂತೆ ಇತರರು ಇದ್ದರು.

Megha News