Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Local News

ಕುಡಿಯುವ ನೀರು ಸರಬರಾಜಿನಲ್ಲಿ ನಗರಸಭೆ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ಕುಡಿಯುವ ನೀರು ಸರಬರಾಜಿನಲ್ಲಿ ನಗರಸಭೆ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ರಾಯಚೂರು. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಳವಾಗಿದ್ದು, ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುವಲ್ಲಿ ವಿಫಲವಾಗಿದೆ, ಕುಡಿಯುವ ನೀರು ಒದಗಿಸಿಕೊ ಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ (ಭೀಮವಾದ) ಸಮಿತಿ ವತಿಯಿಂದ ನಗರಸಭೆ ಮುಂದೆ ಪ್ರತಿಭಟನೆ ನಡೆಸಿ ಪೌರಾಯಕ್ತರಿಗೆ ಮನವಿ ಸಲ್ಲಿಸಿದರು.

ನಗತದಲ್ಲಿ ಕಳೆದ ನಾಲ್ಕು ದಿನಗಳಿಂದ ಕುಡಿಯ ಲು ನೀರು ಸರಬರಾಜಿನಲ್ಲಿ ವ್ಯತ್ಯವಾಗುತ್ತಿದೆ, ಸಾರ್ವಜನಿಕರಿಗೆ ಅನಾನುಕೂಲವಾಗಿದೆ, ನಗರದಲ್ಲಿ ಕುಡಿಯುವ ನೀರಿನ ಪೂರೈಸುವಲ್ಲಿ ಸನಗಸಭೆ ಹಾಗೂ ಅಧಿಕಾರಿಗಳು ಸಂಪೂರ್ಣ ವಿದಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಎಲ್ಲಾ ಬಡಾವಣೆಗಳಿಗೆ ನಿತ್ಯ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಬೇಕು, ಇಲ್ಲದೇ ಇದ್ದರೆ ನಗರಸಭೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಎಸ್ ನರಸಿಂಹಲು, ರಾಜ್ಯ ಸಂಚಾಲಕ ಹನುಮೇಶ್ ಆರೋಲಿ, ಶೇರ್ ಜಲಾಲ್, ಅನ್ವರ್ ಪಾಷಾ, ಎಂ.ಡಿ ಮಾಸೂಮ್ ಸೇರಿದಂತೆ ಇತರರು ಇದ್ದರು.

Megha News