Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಎಸ್.ಎಂ.ಕೃಷ್ಣ ನಿಧನ, ನಾಳೆ ಸರ್ಕಾರಿ ರಜೆ, ಮೂರು ದಿನ ಶೋಕಾಚರಣೆ

ಎಸ್.ಎಂ.ಕೃಷ್ಣ ನಿಧನ, ನಾಳೆ ಸರ್ಕಾರಿ ರಜೆ, ಮೂರು ದಿನ ಶೋಕಾಚರಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನಿಧನದ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಿ ಸರ್ಕಾರ ಆದೇಶಿಸಿದೆ.

ನಾಳೆ ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು ಸರ್ಕಾರಿ ಗೌರವಗಳೊಂದಿಗೆ ನಡೆಸಿಕೊಡಲಾಗುತ್ತದೆ, ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಿದೆ.
ಸರ್ಕಾರಿ ರಜೆ ಹಿನ್ನೆಲೆ ಸರ್ಕಾರಿ ಮತ್ತು ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆ ಘೋಷಿಸಲಾಗಿದೆ.
ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

Megha News