Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local News

ಜಿಲ್ಲೆಯ ಇಬ್ಬರಿಗೆ ಸಹಕಾರ ರತ್ನ ಪ್ರಶಸ್ತಿ

ಜಿಲ್ಲೆಯ ಇಬ್ಬರಿಗೆ ಸಹಕಾರ ರತ್ನ ಪ್ರಶಸ್ತಿ

ರಾಯಚೂರು. ಸಹಕಾರ ಕ್ಷೇತ್ರದಲ್ಲಿನ ಗಣನೀ ಯ ಸಾಧನೆಯನ್ನು ಗುರುತಿಸಿ ಸರ್ಕಾರದಿಂದ ನೀಡಲಾಗುವ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಜಿಲ್ಲೆಯ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಪಾಟೀಲ್ ಶಾವಂ ತಗೇರಿ ಹಾಗೂ ಮಸ್ಕಿಯ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ನಿರ್ದೇಶಕ ಕೆ.ಅಮರೇಶ ಪಾಟೀಲ್‌ರನ್ನು ಆಯ್ಕೆ ಮಾಡಲಾಗಿದೆ.

ಪ್ರತಿವರ್ಷ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಸಕ್ತ ಸಾಲಿನ ಪ್ರಶಸ್ತಿಗೆ ವಿಜಯಕುಮಾರ ಪಾಟೀಲ್ ಶಾವಂತಗೇರಿ, ಕೆ.ಅಮರೇಶ ಪಾಟೀ ಲ್ ಆಯ್ಕೆ ಮಾಡಲಾಗಿದೆ.
ವಿಜಯಪುರದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಆವರಣದ್ಲಲಿ ನ.20ರಂದು ನಡೆಯಲಿರುವ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ವ್ಯವಸ್ಥಾಪಕ ನಿರ್ದೇಶಕ ಕೆ.ಎಸ್.ನವೀನ್ ತಿಳಿಸಿದ್ದಾರೆ.

Megha News