Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

Crime News

ಸೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

ಸೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

ರಾಯಚೂರು.ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ ಮಾಡಿಕೊಂ ಡಿರುವ ಘಟನೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ.

ಮೃತ ವ್ಯಕ್ತಿ ಹುಲಿಗೇಪ್ಪ (20) ಎಂದು ಗುರುತಿಸ ಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯ ದಲ್ಲಿ ಡೆತ್‌ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆ ವಿವರ:- ಜಮೀನು ವಿಚಾರಕ್ಕಾಗಿ ಹುಲಿಗೆಪ್ಪ ತಮ್ಮ ಸೋದರತ್ತೆ ಲಕ್ಷ್ಮೀ ನಡುವೆ ಜಗಳ ನಡೆದಿತ್ತು, ಅತ್ತೆಯ ಬೆದರಿಕೆಗೆ ಮನ ನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿ ದ್ದಾನೆ ಎನ್ನಲಾಗಿದೆ.
ಡೆತ್ ನೋಟ್‌ನಲ್ಲಿ ಜಾಗದ ವಿಚಾರವಾಗಿ ಅತ್ತೆ ಲಕ್ಷ್ಮಿ, ಅತ್ತೆಯ ಮಗಳ ಅನುರಾಧ, ಮಹಾದೇವಿ, ಅನಿಲ್ ಎಂಬುವವರ ಹೆಸರು ಪ್ರಸ್ತಾಪಿಸಿದ್ದಾರೆ.
ನನ್ನ ಸಾವಿಗೆ ನನ್ನ ಅತ್ತೆ ಲಕ್ಷ್ಮಿದೇವಿ ಮತ್ತು ಆಕೆಯ ಮಕ್ಕಳೇ ಕಾರಣ, ಜಮೀನು ನಮಗೆ ಸೇರಿದೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಡೆತ್ ನೋಟಿನಲ್ಲಿ ಬರೆದಿದ್ದಾರೆ.
ಸ್ಥಳಕ್ಕೆ ಸಿರವಾರ ಪೊಲೀಸರು ಆಗಮಿಸಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾಸಿದಿದ್ದಾರೆ.
ಈ ಕುರಿತು ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Megha News