Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

Local News

ಮನ್ಸಲಾಪೂರ: ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ ನೀತಿ ಸಂಹಿತೆ ಉಲ್ಲಂಘನೆ

ಮನ್ಸಲಾಪೂರ: ದೇವಸ್ಥಾನದಲ್ಲಿ ಚುನಾವಣಾ ಪ್ರಚಾರ ಸಭೆ ನೀತಿ ಸಂಹಿತೆ ಉಲ್ಲಂಘನೆ

ರಾಯಚೂರು. ದೇವಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಪರ ಪ್ರಚಾರ ಸಭೆ ನಡೆಸಿ ಕರ ಪತ್ರಗಳನ್ನು ಹಂಚಿದ್ದು ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ.

ತಾಲೂಕಿನ ಮನ್ಸಲಾಪೂರ ಗ್ರಾಮದ ಹುಲಿಗೆಮ್ಮ ದೇವಸ್ಥಾನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಪರ ಕಾಂಗ್ರೆಸ್ ಮುಖಂಡರು ಗ್ರಾಮಸ್ಥರನ್ನು ಹುಲಿಗೆಮ್ಮ ದೇವಸ್ಥಾನದಲ್ಲಿ ಸೇರಿಸಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಅವರ ಭಾವಚಿತ್ರ ಇರುವ ಕರ ಪತ್ರಗಳನ್ನು ಹಂಚಿದ್ದಾರೆ. ನಂತರ ಮತಯಾಚನೆ ಮಾಡಿ, ಸಭೆ ನಡೆಸಿದರು.
ಕಾಂಗ್ರೆಸ್ ಮುಖಂಡ ವೆಂಕಟೇಶ ನಾಯಕ ಅವರು ಮಾತನಾಡಿದರು,
ಗ್ರಾಮದ ಯುವಕರು ಗ್ರಾಮಸ್ಥರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ.ಕುಮಾರ ನಾಯಕ ಅವರಿಗೆ ಮತ ಹಾಕಬೇಕು ಎಂದು ಮತಯಾಚನೆ ಮಾಡಿದ್ದಾರೆ‌.ಬಳಿಕ ಉಳಿದ ಕಾಂಗ್ರೆಸ್ ಮುಖಂಡರು ಸಹ ಮಾತನಾಡಿದ್ದಾರೆ‌.
ದೇವಸ್ಥಾನ, ಸರ್ಕಾರಿ ಕಚೇರಿಗಳಲ್ಲಿ ಚುನಾವಣಾ ಪ್ರಚಾರ ಮತ್ತು ಸಭೆ ಮಾಡುವುದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಆದರೂ ದೇವಸ್ಥಾನದಲ್ಲಿ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಪರ ಪ್ರಚಾರ ಸಭೆ ನಡೆಸಿದ್ದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ.

Megha News